ವಾಯು ದಾಳಿಯಲ್ಲಿ 250ಕ್ಕೂ ಅಧಿಕ ಉಗ್ರರ ಸಾವು: ಅಮಿತ್ ಶಾ

ಅಹಮದಾಬಾದ್: ಭಾರತದ ವಾಯುಪಡೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಲ್ಲಿ 250ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಜರಾತ್ ನಲ್ಲಿ ಹೇಳಿದ್ದಾರೆ.

ಉರಿಯಲ್ಲಿ ಉಗ್ರರ ದಾಳಿ ಬಳಿಕ ಭಾರತ ಪ್ರತೀಕಾರವಾಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನದ ಉಗ್ರರು ಅಲರ್ಟ್ ಆಗಿದ್ದರಿಂದ ವಾಯು ದಾಳಿ ನಡೆಸಲಾಯ್ತು. ಪುಲ್ವಾಮಾ ದಾಳಿಯ ಬಳಿಕ ಫೆಬ್ರವರಿ 26ರಂದು ವಾಯುದಾಳಿ ನಡೆಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಏರ್ ಸ್ಟ್ರೈಕ್ ನಡೆಸಲು ಅನುಮತಿ ನೀಡಿತ್ತು. ಭಾರತ ಯಶಸ್ವಿಯಾಗಿ ಉಗ್ರರ ತಾಣಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿ ಯಾವುದೇ ಹಾನಿಗೆ ಒಳಗಾಗದೇ ಭಾರತಕ್ಕೆ ಹಿಂದಿರುಗಿತ್ತು ಎಂದು ಅಮಿತ್ ಶಾ ಏರ್ ಸರ್ಜಿಕಲ್ ಸ್ಟ್ರೈಕ್ ಬಗೆಗಿನ ಮಾಹಿತಿ ಹೊರಹಾಕಿದರು.

ವಾಯುದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮರು ದಾಳಿ ನಡೆಸಿತ್ತು. ಪಾಕ್ ಹಿಮ್ಮೆಟ್ಟಿಸುವ ವೇಳೆ ನಮ್ಮ ವಿಂಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನದಲ್ಲಿ ಸೆರೆಗೆ ಒಳಗಾದರು. ಆದರೆ ನರೇಂದ್ರ ಮೋದಿ ಸರ್ಕಾರ 48 ಗಂಟೆಯಲ್ಲಿ ಅಭಿನಂದನ್ ಅವರನ್ನು ಭಾರತಕ್ಕೆ ಕರೆತಂದಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಶತ್ರು ದೇಶದಲ್ಲಿದ್ದ ಯೋಧನನ್ನು ಇಷ್ಟು ಬೇಗ ಕರೆತಂದಿದ್ದು ಭಾರತ ಎಂದು ತಿಳಿಸಿದರು.

ಸೂರತ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಮಮತಾ ಬ್ಯಾನರ್ಜಿ ಸಾಕ್ಷಿ ಕೇಳ್ತಾರೆ, ರಾಹುಲ್ ಗಾಂಧಿ ರಾಜಕೀಯ ಮಾಡ್ತಾರೆ, ಅಖಿಲೇಶ್ ಯಾದವ್ ತನಿಖೆಗೆ ಆಗ್ರಹಿಸುತ್ತಾರೆ. ಇವರೆಲ್ಲರ ಹೇಳಿಕೆ ನಾಚಿಕೆ ತರಿಸುತ್ತದೆ. ನಿಮ್ಮ ಈ ರೀತಿಯ ಹೇಳಿಕೆಗಳಿಗೆ ಶತ್ರು ರಾಷ್ಟ್ರ ಪಾಕಿಸ್ತಾನಿಗಳು ನಗುತ್ತಿದ್ದಾರೆ. ಮೋದಿ ಮತ್ತು ವಾಯುಪಡೆಗೆ ನೀವು ಬೆಂಬಲ ನೀಡದಿದ್ದರೂ ಪರವಾಗಿಲ್ಲ, ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಎಂದು ವಿಪಕ್ಷ ನಾಯಕರಿಗೆ ಚಾಟಿ ಬೀಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *