ರಾತ್ರೋ ರಾತ್ರಿ ತೋಟದಲ್ಲಿದ್ದ 600ಕ್ಕೂ ಹೆಚ್ಚು ಸಸಿಗಳು ನಾಶ

ರಾಯಚೂರು: ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ರಾಯಚೂರು ತಾಲೂಕಿನ ಉಂಡ್ರಾಳದೊಡ್ಡಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಲಕ್ಷಾಂತರ ರೂಪಾಯಿ ಮೌಲ್ಯದ ಮಾವಿನ ಸಸಿಗಳನ್ನು ನಾಶ ಮಾಡಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತ ಗ್ರಾಮ ಪಂಚಾಯ್ತಿ ಸದಸ್ಯ ರಂಗನಾಥ್ ತೋಟದ ಮಾವಿನ ಸಸಿಗಳು ನಾಶವಾಗಿವೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಕೆಲವರು ಹಿಂದಿನಿಂದಲೂ ದ್ವೇಷ ಸಾಧಿಸುತ್ತಿದ್ದು ಅವರೇ ಈ ಕೃತ್ಯ ಎಸಗಿದ್ದಾರೆ ಅಂತ ರಂಗನಾಥ್ ಆರೋಪಿಸಿದ್ದು, ಕರಿಯಪ್ಪ ನಾಯಕ್ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.

9 ಎಕರೆ ಪ್ರದೇಶದಲ್ಲಿ ಬೆಳೆದಿದ್ದ 900 ಗಿಡಗಳಲ್ಲಿ 600 ಕ್ಕೂ ಹೆಚ್ಚು ಗಿಡಗಳನ್ನ ನಾಶ ಮಾಡಲಾಗಿದೆ. ಘಟನೆ ಹಿನ್ನೆಲೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *