ಸೌದಿ ಯುವ ರಾಜನಿಗೆ ಚಿನ್ನ ಲೇಪಿತ ರೈಫಲ್ ಗಿಫ್ಟ್ ಕೊಟ್ಟ ಪಾಕ್

ಇಸ್ಲಾಮಾಬಾದ್: ಪಾಕಿಸ್ತಾನ ಭೇಟಿ ನೀಡಿದ್ದ ಸೌದಿ ಯುವರಾಜ್ ಮೊಹ್ಮದ್ ಬಿನ್ ಸುಲ್ತಾನ್ ಅವರಿಗೆ ಪಾಕಿಸ್ತಾನ ಚಿನ್ನ ಲೇಪಿತ ರೈಫಲನ್ನು ಉಡುಗೊರೆಯಾಗಿ ನೀಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನ ಮೇಲೆ ಮೊದಲ ಬಾರಿಗೆ ವಿಶ್ವದ ಬಹುತೇಕ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹಿಸುತ್ತಿದ್ದು, ಇದೇ ವೇಳೆ ಪಾಕಿಸ್ತಾನಕ್ಕೆ ಭೇಟಿ ನೀಡಿ ಸೌದಿ ಯುವರಾಜ್ 20 ಶತಕೋಟಿ ಡಾಲರ್ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಿದ್ದರು.

ಇದೇ ವೇಳೆ ಪಾಕಿಸ್ತಾನ ಸೆನೆಟ್ ಮೊಹ್ಮದ್ ಬಿನ್ ಸುಲ್ತಾನ್ ರನ್ನು ಭೇಟಿ ಮಾಡಿದ ವೇಳೆ ಈ ಕೊಡುಗೆಯನ್ನು ನೀಡಿದ್ದಾರೆ. ಪುಲ್ವಾಮಾ ದಾಳಿಯ ಬಳಿಕ ಭಾರತ ನೀಡಿದ್ದ ಪರಮಾಪ್ತ ರಾಷ್ಟ್ರ ಸ್ಥಾನಮಾನವನ್ನು ಹಿಂತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ವಸ್ತುಗಳ ಮೇಲೆ ಶೇ.200 ರಷ್ಟು ಆಮದು ಸುಂಕವನ್ನು ಹೆಚ್ಚಳ ಮಾಡಿತ್ತು. ಆ ಬಳಿಕ ವಿಶ್ವದ 40 ರಾಷ್ಟ್ರಗಳು ಭಾರತ ಪರ ಹೇಳಿಕೆ ನೀಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಒತ್ತಡ ಹಾಕಿದೆ.

ಪಾಕಿಸ್ತಾನದ ಬಳಿಕ ಭಾರತಕ್ಕೆ ಭೇಟಿ ನೀಡಿದ್ದ ಸೌದಿ ಯುವರಾಜ ಭಾರತದೊಂದಿಗೆ 100 ಶತಕೋಟಿ ಡಾಲರ್ ಹೂಡಿಕೆ ಹಾಗೂ ಸೌದಿ ರಾಷ್ಟ್ರದಲ್ಲಿ ವಿವಿಧ ಕಾರಣಗಳಿಂದ ಶಿಕ್ಷೆ ಅನುಭವಿಸುತ್ತಿರುವ 2 ಸಾವಿರ ಮಂದಿಯನ್ನು ಬಿಡುಗಡೆ ಮಾಡುವ ಭರವಸೆಯನ್ನು ನೀಡಿದ್ದಾರೆ. ಇತ್ತ ಸೌದಿ ರಾಜಕುಮಾರನನ್ನು ಪ್ರಧಾನಿ ಮೋದಿ ಅವರು ಸ್ವಾಗತ ಕೋರಿರುವ ಕುರಿತು ದೇಶದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷವೂ ಕೂಡ ಮೋದಿ ಅವರು ಸೌದಿ ರಾಜಕುಮಾರರನ್ನು ಅಪ್ಪಿ ಸ್ವಾಗತಿಸಿರುವುದನ್ನು ಟೀಕಿಸಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *