ಭಾರತಕ್ಕೆ ರಾಜತಾಂತ್ರಿಕ ಜಯ – ಶುಕ್ರವಾರ ಪೈಲಟ್ ಅಭಿನಂದನ್ ಬಿಡುಗಡೆ

ಇಸ್ಲಾಮಾಬಾದ್: ಭಾರತದ ಪೈಲಟ್ ಅಭಿನಂದನ್ ಅವರು ಶುಕ್ರವಾರ ಅಧಿಕೃತವಾಗಿ ಬಿಡುಗಡೆಯಾಗಲಿದ್ದಾರೆ.

ಪಾಕಿಸ್ತಾನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್ ಖಾನ್ ಅವರು ಅಭಿನಂದನ್ ಅವರನ್ನು ಶಾಂತಿಯ ಪ್ರತೀಕವಾಗಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಪಾಕ್ ವಾಯುಸೇನೆ ಜೊತೆಗಿನ ಹೋರಾಟದಲ್ಲಿ ಮಿಗ್ ವಿಮಾನ ಪತನಗೊಂಡಿತ್ತು. ಈ ವಿಮಾನದಲ್ಲಿ ಅಭಿನಂದನ್ ಪ್ಯಾರಾಚೂಟ್ ಸಹಾಯದಿಂದ ನೆಲಕ್ಕೆ ಧುಮುಕಿದ್ದರು.

ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶದಲ್ಲಿ ಬಿದ್ದಿದ್ದ ಅಭಿನಂದನ್ ಅವರನ್ನು ಪಾಕ್ ಸೇನೆ ಕಸ್ಟಡಿಗೆ ತೆಗೆದುಕೊಂಡಿತ್ತು. ಜಿನೀವಾ ಒಪ್ಪಂದ ಪ್ರಕಾರ ಪಾಕ್ ಸೇನೆ ಅಭಿನಂದನ್ ಅವರನ್ನು ಬಿಡುಗಡೆ ಮಾಡಲೇಬೇಕಿತ್ತು. ಹೀಗಾಗಿ ಪಾಕಿಸ್ತಾನ ಶುಕ್ರವಾರ ಅಭಿನಂದನ್ ಅವರನ್ನು ಬಿಡುಗಡೆ ಮಾಡಲಿದೆ.

ಏನಿದು ಜಿನೀವಾ ಒಪ್ಪಂದ..?
ಎರಡನೇ ಮಹಾಯುದ್ಧದ ಬಳಿಕ 1949ರಲ್ಲಿ 196 ದೇಶಗಳ ನಡುವೆ ಏರ್ಪಟ್ಟ ವೇಳೆ ಒಪ್ಪಂದ ನಡೆದಿತ್ತು. ಈ ಒಪ್ಪಂದ ಪ್ರಕಾರ ಯುದ್ಧ ಕೈದಿಗಳನ್ನು ಮಾನವೀಯವಾಗಿ ನಡೆಸಿಕೊಳ್ಳಬೇಕು. ಗಾಯಗೊಂಡ, ಅನಾರೋಗ್ಯಕ್ಕೆ ತುತ್ತಾದ ಯುದ್ಧ ಕೈದಿಗಳಿಗೆ ಚಿಕಿತ್ಸೆ ನೀಡಬೇಕು. ಜಿನೀವಾ ಒಪ್ಪಂದ ಆರ್ಟಿಕಲ್ 3 ಅಘೋಷಿತ ಯುದ್ಧಕ್ಕೆ ಸಂಬಂಧಿಸಿದ್ದಾಗಿದೆ. ಯುದ್ಧ ಕೈದಿಯ ಕೊಲೆ, ಹಲ್ಲೆ, ಶಿರಚ್ಛೇದ, ಒತ್ತೆಯಂತಹ ಕೃತ್ಯಗಳನ್ನು ಮಾಡಬಾರದು. ಕಾನೂನು ಪ್ರಕ್ರಿಯೆಗಳನ್ನು ಮಾಡದೇ, ಆರೋಪ ಸಾಬೀತಾಗದೇ ಶಿಕ್ಷೆ ನೀಡಬಾರದು. ಆರೋಪ ಸಾಬೀತಾಗದೇ ಇದ್ದಲ್ಲಿ ಯುದ್ಧ ಕೈದಿಯನ್ನು ಅವರ ದೇಶಕ್ಕೆ ಒಪ್ಪಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *