ಮೈಸೂರು ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಿಗದೆ ರೋಗಿ ಸಾವು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಲ್ಲಿ ತಲೆತಗ್ಗಿಸುವ ಘನಘೋರ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಿಗದೆ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿಯನ್ನು 45 ವರ್ಷದ ಶಂಕರ್ ಎಂದು ಗುರುತಿಸಲಾಗಿದೆ. ನಗರದ ಕೆ.ಆರ್. ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಿಗದೆ ಎರಡು ತಾಸು ಆಂಬುಲೆನ್ಸ್‍ನಲ್ಲೇ ಒದ್ದಾಡಿದ ರೋಗಿ ಕೊನೆಯುಸಿರೆಳೆದಿದ್ದಾರೆ.

ಶಂಕರ್ ಅವರು ಎರಡು ದಿನಗಳ ಹಿಂದೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಗಾಯಗೊಂಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಶಂಕರ್‍ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಣಕಾಸು ಸಮಸ್ಯೆಯ ಕಾರಣ ಕೆ.ಆರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದ್ರೆ ಕೆ.ಆರ್. ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೆ ಆಂಬುಲೆನ್ಸ್‍ನಲ್ಲೇ ಶಂಕರ್ ನರಳಾಡಿದ್ದರು. ಈ ಹಿನ್ನೆಲೆಯಲ್ಲಿ ಶಂಕರ್‍ಗೆ ಮತ್ತೊಬ್ಬ ರೋಗಿಯ ವೆಂಟಿಲೇಟರ್ ತೆಗೆದು ಅಳವಡಿಸಲಾಗಿತ್ತು. ಆದ್ರೆ ಆ ಪ್ರಯತ್ನ ಫಲ ನೀಡಿಲ್ಲ.

Comments

Leave a Reply

Your email address will not be published. Required fields are marked *