20 ವರ್ಷದಿಂದ ಬರಿದಾಗಿದ್ದ ಕೆರೆಗೆ ಬಂತು ನೀರು – ಶಾಸಕರನ್ನು ಆನೆ ಮೇಲೆ ಕೂರಿಸಿ ಮೆರವಣಿಗೆ

ಹಾವೇರಿ: 20 ವರ್ಷಗಳಿಂದ ಬರಿದಾಗಿದ್ದ ಕೆರೆಗೆ ನೀರು ತುಂಬಿಸಿದ್ದಕ್ಕೆ ಹಾವೇರಿ ಶಾಸಕ ನೆಹರು ಓಲೇಕಾರ ಅವರನ್ನು ಗ್ರಾಮಸ್ಥರು ಆನೆ ಮೇಲೆ ಕೂರಿಸಿ ಮೆರವಣಿಗೆ ಮಾಡಿದ್ದಾರೆ.

ಕಳೆದ 20 ವರ್ಷಗಳಿಂದ ಕನವಳ್ಳಿ ಗ್ರಾಮದ ಕೆರೆಯಲ್ಲಿ ನೀರು ಕಾಣದೆ ಗ್ರಾಮಸ್ಥರು ಕಂಗಾಲಾಗಿದ್ದರು. ಆದರೆ ಈ ಸಮಸ್ಯೆಗೆ ಶಾಸಕ ನೆಹರು ಓಲೇಕಾರ ಪರಿಹಾರ ನೀಡಿದ್ದು, ಕೆರೆಗೆ ನೀರು ತುಂಬಿಸಿ ಜನರಿಗೆ ನೆರವಾಗಿದ್ದಾರೆ. ಹೀಗಾಗಿ ತಮ್ಮ ಸಮಸ್ಯೆಗೆ ಸ್ಪಂದಿಸಿದ್ದಕ್ಕೆ ಶಾಸಕರಿಗೆ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಕೃತಜ್ಞತೆ ಸಲ್ಲಿಸಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಆನೆ ಮೇಲೆ ಶಾಸಕರನ್ನು ಕೂರಿಸಿ ಮೆರವಣಿಗೆ ಮಾಡಿ ಗೌರವಿಸಿದ್ದಾರೆ.

ಕೆರೆಗೆ ನೀರು ತುಂಬಿಸುವ ಯೋಜನೆಗೆ ಇಂದು ಓಲೇಕಾರ ಅವರು ಚಾಲನೆ ಕೊಟ್ಟಿದ್ದಾರೆ. ಪೈಪ್ ಲೈನ್ ಮೂಲಕ ಕೆರಗೆ ನೀರು ಹರಿಸಲು ಸಹಕಾರ ನೀಡಿದ್ದಾರೆ. ಇದರಿಂದ ಇಷ್ಟು ದಿನ ನೀರಿನ ಸಮಸ್ಯೆ ಎದುರಿಸುತ್ತಿದ್ದ ಗ್ರಾಮಸ್ಥರ ಮೊಗದಲ್ಲಿ ಮಂದಹಾಸ ಮೂಡಿದ್ದು, ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *