ತುಂಬಿ ಹರಿಯುತಿದೆ ಡೋಣಿ ನದಿ: ಸೇತುವೆಗಳು ಜಲಾವೃತ- 5 ಗ್ರಾಮಗಳ ಸಂಪರ್ಕ ಕಡಿತ

ವಿಜಯಪುರ: ಬುಧವಾರ ರಾತ್ರಿ ಸುರಿದ ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದ್ದು, ರಸ್ತೆಗಳು ಹಾಗೂ ಸೇತುವೆಗಳು ಜಲಾವೃತಗೊಂಡಿವೆ.

ಸೇತುವೆಗಳು ಜಲವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಾಳಿಕೋಟೆ ಪಟ್ಟಣದಿಂದ ಒಟ್ಟು ಐದು ಗ್ರಾಮಗಳು ಸಂಪರ್ಕವನ್ನು ಕಳೆದುಕೊಂಡಿವೆ. ಜಿಲ್ಲೆಯ ಹಡಗಿನಾಳ, ಶಿವಪೂರ, ಕಲ್ಕದೇವನಹಳ್ಳಿ ಸೇರಿದಂತೆ ಐದು ಗ್ರಾಮಗಳ ಸಂಪರ್ಕ ಕಳೆದುಕೊಂಡಿವೆ.

ಡೋಣಿ ನದಿಯ ದಡದಲ್ಲಿರುವ ಗ್ರಾಮಗಳ ರಸ್ತೆಗಳ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಇನ್ನೂ ಮಳೆ ಹೆಚ್ಚಾದರೆ ನದಿ ತೀರದ ಗ್ರಾಮಗಳು ಜಲಾವೃತಗಳ್ಳಬಹುದು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

https://www.youtube.com/watch?v=M6-cTiZr02w

 

 

Comments

Leave a Reply

Your email address will not be published. Required fields are marked *