ಮತದಾನ ಮಾಡದ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ತರಾಟೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದೆ. ಮತದಾನದ ದಿನ ಹಲವು ಮಂದಿ ಮತದಾನ ಮಾಡಿಲ್ಲ. ಅದ್ರಲ್ಲಿ ನಟಿ, ಮಾಜಿ ಸಂಸದೆ ಮತ್ತು ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ ಕೂಡ ಒಬ್ಬರಾಗಿದ್ದಾರೆ.

ಮಂಡ್ಯದ ಕೆ.ಆರ್ ರಸ್ತೆಯ ಪಿಎಲ್‍ಡಿ ಬ್ಯಾಂಕ್ ಮತಗಟ್ಟೆಯಲ್ಲಿ ರಮ್ಯಾ ಅವರು ಮತದಾನ ಮಾಡಬೇಕಾಗಿತ್ತು. ಆದರೆ ಇದೀಗ ಅವರು ಮತದಾನ ಮಾಡದೆ ದೂರು ಉಳಿದಿದ್ದರಿಂದ ಜನ ಸಾಮಾಜಿಕ ಜಾಲತಾಣಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ವೋಟು ಮಾಡದವರಿಗೆ ರಾಜಕೀಯ ಮಾತಾನಾಡುವ ನೈತಿಕತೆ ಎಲ್ಲಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದು, ನಂಬರ್ ಒನ್ ಸಿಟಿಜನ್ ಅಂತ ಲೇವಡಿ ಮಾಡಿದ್ದಾರೆ. ರಮ್ಯಾ ಮತ್ತು ಬಹುಭಾಷಾ ನಟ ಪ್ರಕಾಶ್ ರೈ ಅವರು ಪೃಧಾನಿ ಮೋದಿ ಬಗ್ಗೆ ಮಾತನಾಡುತ್ತಾ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮ್ಯಾ ವೋಟು ಮಾಡಿಲ್ಲ ಅಂದರೆ ಪಾಕಿಸ್ತಾನಕ್ಕೆ ಹೋಗೋಕೆ ಹೇಳಿ ಅಂತಾ ಜನರು ಕಿಡಿ ಕಾರಿದ್ದು, ಮೊದಲು ವೋಟ್ ಮಾಡಿ ಜವಾಬ್ದಾರಿ ಕಲಿಯಿರಿ ರಮ್ಯಾ ಅವರಿಗೆ ಅಂತಾ ಟಾಂಗ್ ಕೊಟ್ಟಿದ್ದಾರೆ.

Comments

Leave a Reply

Your email address will not be published. Required fields are marked *