ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಅಡುಗೆ ಭಟ್ಟ

ಬೆಳಗಾವಿ: ಕೌಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

ಶೇಖರ್ ತೇಜಪ್ಪ ಶೆಟ್ಟಿ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಂಕೇಶ್ವರ ಪಟ್ಟಣದ ಶಬರಿ ಹೋಟೆಲ್‍ನಲ್ಲಿ ಶೇಖರ್ ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿದ್ದರು. ಶೇಖರ್ ತಾವು ಕೆಲಸ ಮಾಡುತ್ತಿದ್ದ ಹೋಟೆಲ್ ಕಟ್ಟಡದ ಮೆಟ್ಟಿಲ ಬಳಿಯೇ ನೇಣಿಗೆ ಶರಣಾಗಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಹಾಗೂ ವೈಯಕ್ತಿಕ ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *