ಕ್ಷುಲ್ಲಕ ವಿಚಾರಕ್ಕೆ ಕಲಹ- ವ್ಯಕ್ತಿ ಮೇಲೆ ಗುಂಡಿನ ದಾಳಿ

ಮಡಿಕೇರಿ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ನಡೆದ ಪರಿಣಾಮ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ನಾಗೇಶ್ ಹಾಗೂ ಮಾದಪ್ಪ ಎಂಬವರಿಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದಿದ್ದು, ನಾಗೇಶ್ ಮಾದಪ್ಪ ಎಂಬವರ ಮೇಲೆ 2 ಸುತ್ತು ಗುಂಡು ಹಾರಿಸಿ ದಾಳಿಗೆ ಮುಂದಾಗಿದ್ದಾನೆ. ದಾಳಿಯಿಂದ ತಪ್ಪಿಸಿಕೊಂಡ ಮಾದಪ್ಪ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ಬಗ್ಗೆ ಮಾದಪ್ಪ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ನಾಗೇಶ್‍ ನನ್ನ ಪೊಲೀಸರು ಬಂಧಿಸಿ ನಾಡ ಬಂದೂಕನ್ನ ವಶಕ್ಕೆ ಪಡೆದಿದ್ದಾರೆ.

Comments

Leave a Reply

Your email address will not be published. Required fields are marked *