ತಂಗಿಯನ್ನು ಭೇಟಿಯಾಗಲು ಬಂದಿದ್ದ ಅಣ್ಣ ಕೊಲೆಯಾದ

ಗದಗ: ತಂಗಿಯನ್ನು ಭೇಟಿಯಾಗಲು ಬಂದಿದ್ದ ಅಣ್ಣನನ್ನು ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆಗೈದಿರುವ ಘಟನೆ ಗದಗನ ಬೆಟಗೇರಿಯ ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ.

ಗದಗ ತಾಲೂಕಿನ ಹರ್ತಿ ಗ್ರಾಮದ 42 ವರ್ಷದ ಆನಂದ ಭಜಂತ್ರಿ ಕೊಲೆಯಾದ ವ್ಯಕ್ತಿ. ಆನಂದ್ ಎರಡು ದಿನಗಳ ಹಿಂದೆ ತಂಗಿಯನ್ನು ಭೇಟಿಯಾಗಲು ಬೆಟಗೇರಿಗೆ ಬಂದಿದ್ದರು. ಬುಧವಾರ ರಾತ್ರಿ ಊಟ ಮಾಡಿ ಮನೆಯ ಹತ್ತಿರದ ಖಾಲಿಯಿರುವ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಮಲಗಿದ್ದರು. ಆನಂದ್ ನಿದ್ರೆಯಲ್ಲಿದ್ದಾಗ ಯಾರೋ ದುಷ್ಕರ್ಮಿಗಳು ತಲೆ, ಮುಖದ ಭಾಗದ ಜಜ್ಜಿ ಕೊಲೆಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬೆಟಗೇರಿ ಪೊಲೀಸರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಬೆಟಗೇರಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments

Leave a Reply

Your email address will not be published. Required fields are marked *