ಅಗ್ನಿ ಅವಘಡದಿಂದ 30 ಜನರ ಪ್ರಾಣ ಉಳಿಸಿ ಮೃತಪಟ್ಟ ಸಾಕುನಾಯಿ

ಲಕ್ನೌ: ಸಾಕುನಾಯಿ ಅಗ್ನಿ ಅವಘಡದಿಂದ 30 ಜನರ ಪ್ರಾಣ ಉಳಿಸಿ ಮೃತಪಟ್ಟ ಘಟನೆಯೊಂದು ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಬಾಂದಾದಲ್ಲಿ ನಡೆದಿದೆ.

ಬಾಂದಾ ಜಿಲ್ಲೆಯ ಲಖನ್ ಕಾಲೋನಿಯ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೇಸ್‍ಮೆಂಟ್ ಹಾಗೂ ಮೊದಲನೇ ಮಹಡಿಯಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಶೋರೂಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಅದೇ ಕಟ್ಟಡದ ಮೂರನೇ ಹಾಗೂ ನಾಲ್ಕನೇ ಮಹಡಿಯಲ್ಲಿ ಕುಟುಂಬಗಳು ವಾಸಿಸುತ್ತಿತ್ತು.

ಸಾಕುನಾಯಿ ಕೂಡ ಅದೇ ಕಟ್ಟಡದಲ್ಲಿ ವಾಸವಾಗಿತ್ತು. ಅಗ್ನಿ ಅವಘಡ ಸಂಭವಿಸಿದನ್ನು ನೋಡಿದ ನಾಯಿ ಜೋರಾಗಿ ಬೊಗಳಲು ಶುರು ಮಾಡಿತ್ತು. ಆಗ ಆ ಬಿಲ್ಡಿಂಗ್‍ನಲ್ಲಿದ್ದ ಜನರು ಸುರಕ್ಷಿತವಾಗಿ ಅಲ್ಲಿಂದ ಹೊರ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ನಾಯಿ ಮೃತಪಡುವ ಕೊನೆ ಕ್ಷಣದವರೆಗೂ ಎಲ್ಲರ ಪ್ರಾಣ ಉಳಿಸಿತ್ತು. ಆದರೆ ನಾಯಿ ಸ್ವತಃ ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅಗ್ನಿ ಅವಘಡ ಆದಾಗ ನಾಯಿಯನ್ನು ಕಟ್ಟಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಪರಿಣಾಮ ಅದು ಮೃತಪಟ್ಟಿದೆ.

ನಾಯಿ ಜೋರಾಗಿ ಬೊಗಳಿ ನಮ್ಮನ್ನು ಎಚ್ಚರಗೊಳಿಸಿತು. ನಾಯಿ ಜೋರಾಗಿ ಬೊಗಳಿ ಎಲ್ಲರ ಪ್ರಾಣ ಉಳಿಸಿಕೊಳ್ಳಲು ಸಹಾಯ ಮಾಡಿತ್ತು. ಈ ಕಟ್ಟಡದಲ್ಲಿದ್ದ ಜನರು ಸುರಕ್ಷಿತವಾಗಿ ಹೊರ ಬಂದರು. ಆದರೆ ಸಿಲಿಂಡರ್ ಬ್ಲಾಸ್ಟ್ ಆಗಿ ನಾಯಿ ಮೃತಪಟ್ಟಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ಈ ಕಟ್ಟಡದ ಬೇಸ್‍ಮೆಂಟ್‍ನಲ್ಲಿ ಶಾರ್ಟ್ ಸರ್ಕ್ಯೂಟ್‍ ಆದ ಕಾರಣ ಅಗ್ನಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ವಿನಯ್ ಕುಮಾರ್ ತಿಳಿಸಿದ್ದಾರೆ. ಅಲ್ಲದೆ ಕಟ್ಟಡದಲ್ಲಿದ್ದ ಸಿಲಿಂಡರ್‍ಗಳು ಬ್ಲಾಸ್ಟ್ ಆದ ಪರಿಣಾಮ ಹತ್ತಿರದಲ್ಲಿದ್ದ ನಾಲ್ಕು ಕಟ್ಟಡಗಳು ಧ್ವಂಸವಾಗಿದೆ.

Comments

Leave a Reply

Your email address will not be published. Required fields are marked *