ಬೆತ್ತನಗೆರೆ ಮಂಜನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಬೆಂಗಳೂರು: ನೆಲಮಂಗಲ ಸಮೀಪದ ಬೆತ್ತನಗೆರೆ ಗ್ರಾಮದಲ್ಲಿ ಬೆತ್ತನಗೆರೆ ಮಂಜನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.

ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಯಶವಂತಪುರ ಆಟೋ ಸ್ವಾಮಿ ಎಂಬುವನಿಂದ ಕೃತ್ಯ ನಡೆದಿದೆ ಎಂದು ಬೆತ್ತನಗೆರೆ ಮಂಜನ ತಂದೆ ಹನುಮಂತರಾಯಪ್ಪ ಆರೋಪಿಸಿದ್ದಾರೆ. ನಿನ್ನೆ ರಾತ್ರಿ ದಾಳಿ ನಡೆದಿದ್ದು, ನಾಲ್ಕೈದು ಬಾರಿ ಪೆಟ್ರೋಲ್ ಬಾಂಬ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ದಾಳಿ ವೇಳೆ ಮನೆಯಲ್ಲಿದ್ದ ಮಂಜನ ತಂದೆ ಹನುಮಂತರಾಯಪ್ಪ ಹಾಗೂ ತಾಯಿ ಕುಸುಮ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಇದಕ್ಕೂ ಮುನ್ನ ಸೋಮವಾರ ಸಂಜೆ ಮನೆ ಬಳಿ ಕಾರಿನಲ್ಲಿ ಬಂದವರು ನಿನ್ನ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ರಂತೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *