ಭಾನುವಾರ ಬಂಕ್ ಮುಚ್ಚುವ ನಿರ್ಧಾರದಿಂದ ತಾತ್ಕಾಲಿಕವಾಗಿ ಹಿಂದೆ ಸರಿದ ಪೆಟ್ರೋಲ್ ಬಂಕ್ ಮಾಲೀಕರು

ಬೆಂಗಳೂರು: ಇವತ್ತು ಭಾನುವಾರ. ಆದರೂ ರಾಜ್ಯಾದ್ಯಂತ ಪೆಟ್ರೋಲ್ ಸಿಗುತ್ತೆ. ಇಂದಿನಿಂದ ಪ್ರತಿ ಭಾನುವಾರ ಬಂಕ್ ಮುಚ್ಚುವ ನಿರ್ಧಾರದಿಂದ ಮಾಲೀಕರು ಹಿಂದೆ ಸರಿದಿದ್ದಾರೆ.

ಮೇ 17ರಂದು ಮುಂಬೈನಲ್ಲಿ ತೈಲ ಕಂಪನಿಗಳ ಜೊತೆಗೆ ಮಾತುಕತೆ ನಡೆಯಲಿದೆ. ಕಮಿಷನ್ ಹೆಚ್ಚಳ, ಡೀಲರ್‍ಗಳಿಗೆ ಹೆಚ್ಚಿನ ಸೌಲಭ್ಯ ಸೇರಿದಂತೆ ಪ್ರಮುಖ ಬೇಡಿಕೆಗಳ ಜಾರಿಗೆ ಬಂಕ್ ಮಾಲೀಕರು ಆಗ್ರಹಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಭಾನುವಾರ ರಜೆ ಘೋಷಿಸಿ ಸೋಮವಾರ ಬೆಳಗ್ಗೆ 9ರಿಂದ 6 ಗಂಟೆವರೆಗೆ ಮಾತ್ರ ಬಂಕ್ ಓಪನ್ ಮಾಡಲು ತೀರ್ಮಾನಿಸಿದ್ದರು. ಆದ್ರೆ ಬುಧವಾರ ಮುಂಬೈನಲ್ಲಿ ಸಂಧಾನ ಸಭೆ ನಡೆಯೋ ಕಾರಣ ತಾತ್ಕಾಲಿಕವಾಗಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿರೋದಾಗಿ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರನಾಥ್ ಹೇಳಿದ್ದಾರೆ.

ಪೆಟ್ರೋಲ್ ಬಂಕ್ ಮಾಲೀಕರ ಬೇಡಿಕೆಗಳೇನು..?
* ಅಪೂರ್ವ ಚಂದ್ರ ಕಮಿಟಿ ಜಾರಿ ಮಾಡಬೇಕು.
* ಜನವರಿ-ಜುಲೈ ಒಳಗೆ ಆರು ತಿಂಗಳೊಳಗೆ ಎಲ್ಲಾ ಬಿಲ್ಲುಗಳ ಪರಿಷ್ಕರಣೆಯಾಗಬೇಕು
* ಈಗ ಇರುವ ಕಮಿಷನ್ ಹೆಚ್ಚಳ ಮಾಡಬೇಕು
* ಪೆಟ್ರೋಲ್‍ಗೆ 15, ಡೀಸೆಲ್‍ಗೆ 10 ಪೈಸೆ ಕಮಿಷನ್ ಮಾಲೀಕರಿಗೆ ನೀಡಲು ಒತ್ತಾಯ.
* ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ವಾರದ ರಜೆ ಮಾಡಲು ತೀರ್ಮಾನಿಸಲಾಗಿದೆ
ಅಪೂರ್ವ ಚಂದ್ರ ಕಮಿಟಿ ಶಿಫಾರಸ್ಸುಗಳೇನು?:
 ಪ್ರತಿ ಆರು ತಿಂಗಳಿಗೆ ಸಿಬ್ಬಂದಿ, ಮೂಲ ಸೌಕರ್ಯಗಳ ವೇತನ ಪರಿಷ್ಕರಣೆ ಮಾಡಬೇಕು
 ಡೀಲರ್‍ಗಳಿಗೆ ಹೆಚ್ಚಿನ ಸೌಲಭ್ಯ ನೀಡಬೇಕು.
 ಈಗ ಇರುವ ಕಮಿಷನ್ ಅನ್ನು ಹೆಚ್ಚಳ ಮಾಡಬೇಕು.

ಇದನ್ನೂ ಓದಿ:  ಪೆಟ್ರೋಲ್ ಬಂಕ್‍ಗಳಲ್ಲಿ ಹೀಗೂ ಮೋಸ ಮಾಡ್ತಾರೆ ಗೊತ್ತಾ!

Comments

Leave a Reply

Your email address will not be published. Required fields are marked *