‘ಫಾನಿ’ ಸೈಕ್ಲೋನ್ ಎಫೆಕ್ಟ್ – ಕೇರಳದಲ್ಲಿ ಹೈ ಅಲರ್ಟ್

ಬೆಂಗಳೂರು: ಹಿಂದೂ ಮಹಾಸಾಗರದ ಭಾಗ ಸೇರಿ ಬಂಗಾಳ ಕೊಲ್ಲಿಯಲ್ಲಿ (ಶ್ರೀಲಂಕಾ ಹಾಗೂ ತಮಿಳುನಾಡಿನ ಆಗ್ನೇಯ ಭಾಗದಲ್ಲಿ) ನಿರ್ಮಾಣವಾಗಿರುವ ಚಂಡಮಾರುತದ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದೆ.

ಹವಾಮಾನ ಇಲಾಖೆ ನೀಡಿರುವ ಬುಲೆಟಿನ್ ಅನ್ವಯ ಏಪ್ರಿಲ್ 29ಕ್ಕೆ ಕೇರಳದ 4 ಜಿಲ್ಲೆಗಳಾದ ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ವಯನಾಡು ಜಿಲ್ಲೆಗಳಲ್ಲಿ ಸೈಕ್ಲೋನ್ ಪ್ರಭಾವ ಬೀರಲಿದೆ. ಏಪ್ರಿಲ್ 30ಕ್ಕೆ ಕೇರಳದ 8 ಜಿಲ್ಲೆಗಳಲ್ಲಿ ಅಂದರೆ ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕೊಟ್ಟಾಯಂ, ವಯನಾಡು, ಕೋಝಿಕ್ಕೋಡ್, ಪಾಲಕ್ಕಾಡ್ ಜಿಲ್ಲೆಗಳಿಗೆ ಪ್ರವೇಶ ಮಾಡುವ ಮುನ್ಸೂಚನೆ ಇರುವುದರಿಂದ ಙeಟಟoತಿ ಅಲರ್ಟ್ ಘೋಷಿಸಲಾಗಿದೆ.

ಫಾನಿ ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೇರಳದಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದೆ. ಮಾತ್ರವಲ್ಲದೇ ತಮಿಳುನಾಡು, ಕೇರಳ ಕರಾವಳಿಯಲ್ಲಿ ಭಾರೀ ಹಾನಿ ಸಾಧ್ಯತೆ ಇರುವುದಾಗಿ ತಿಳಿಸಿದೆ.

ಫಾನಿ ಚಂಡಮಾರುತ ಶುರುವಾದಾಗ ಗಂಟೆಗೆ 90-115 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಕೇರಳದಲ್ಲಿ ಗಂಟೆಗೆ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ. ಪರಿಣಾಮ ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಗಾಳಿ ಮಳೆಯ ಆಗುವ ಕುರಿತು ಅಂದಾಜಿಸಲಾಗಿದೆ.

ಫಾನಿ ಚಂಡಮಾರುತದ ಬಿಸಿ ರಾಜ್ಯಕ್ಕೂ ತಟ್ಟಲಿದ್ದು, ಏ.28ರ ನಂತರ ಮೇ 2ರ ವರೆಗೂ ಹಳೆ ಮೈಸೂರು ಭಾಗದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನದಲ್ಲಿ ಚಂಡಮಾರುತ ಪರಿಣಾಮ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಇತ್ತ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎನ್.ಶ್ರೀನಿವಾಸರೆಡ್ಡಿ ಅವರು ತಿಳಿಸಿದ್ದರು.

ಫಾನಿ ಚಂಡಮಾರುತ ಮೊದಲು ತಮಿಳುನಾಡಿನ ದಕ್ಷಿಣ ಭಾಗಕ್ಕೆ ಬಂದು ತಲುಪುತ್ತದೆ ಎನ್ನುವ ನಿರೀಕ್ಷೆ ಇತ್ತು. ಆದರೆ ದಿಕ್ಕು ಬದಲಾಯಿಸಿ, ಪೂರ್ವದ ಕಡೆಗೆ ದಿಕ್ಕು ಬದಲಿಸುವ ಅವಕಾಶ ಹೆಚ್ಚಿದೆ ಎಂದು ಹವಮಾನ ಇಲಾಖೆ ಸ್ಪಷ್ಟಪಡಿಸಿದೆ. ಚೆನ್ನೈನಿಂದ 1,340 ಕಿಲೋ ಮೀಟರ್ ದೂರದಲ್ಲಿ ಚಂಡಮಾರುತದ ಕೇಂದ್ರ ಸ್ಥಾನ ರಚನೆ ಆಗಿರುವ ಕುರಿತು ಮಾಹಿತಿ ಲಭಿಸಿದೆ.

Comments

Leave a Reply

Your email address will not be published. Required fields are marked *