ಫೋನ್ ಟ್ಯಾಪಿಂಗ್ ಆರೋಪ- ಎಚ್‍ಡಿಕೆಗೆ ಸಂಕಷ್ಟ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದೇ ಆಗಿದ್ದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಅವರಿಗೆ ಸಂಕಷ್ಟಗಳೇ ಎದುರಾಗುತ್ತಿದೆ. ಯಾವ ಕಡೆ ಹೋದರೂ ಮಾಜಿ ಸಿಎಂ ಸಿಕ್ಕಿ ಬೀಳುತ್ತಿದ್ದಾರೆ.

ಹೌದು. ಪೋನ್ ಟ್ಯಾಪಿಂಗ್ ಆರೋಪ ಎದುರಿಸುತ್ತಿರುವ ಎಚ್‍ಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಮುಂದಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಸೂಚನೆ ಮೇರೆಗೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಫೋನ್ ಕದ್ದಾಲಿಕೆ ಪ್ರಕರಣಕ ದೊಡ್ಡ ಅಪರಾಧ ಹೀಗೆ ಬಿಟ್ಟರೆ ಸಮಾಜಕ್ಕೆ ಕೆಟ್ಟ ಸಂದೇಶ ಹೋಗಲಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ ಎಂದು ಸಿಎಂ ಯಡಿಯೂರಪ್ಪಗೆ ಸೂಚನೆ ನೀಡಿದ್ದಾರೆ. ಅಮಿತ್ ಶಾ ಸೂಚನೆಯ ಮೇರೆಗೆ ಯಡಿಯೂರಪ್ಪ ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ನೀಡುವ ಸಾಧ್ಯತೆ ಇದೆ. ಸದ್ಯ ಈಗಾಗಲೇ ಡಿಜಿಪಿ ನೀಲಮಣಿ ವರದಿಯನ್ನು ಸರ್ಕಾರದ ಗೃಹ ಇಲಾಖೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 34 ಜಿಬಿ ಆಡಿಯೋ ರೆಕಾರ್ಡ್, 6 ಸಾವಿರ ಕರೆ ಕದ್ದಾಲಿಕೆ – ಫೋನ್ ಟ್ಯಾಪಿಂಗ್ ಹೇಗೆ ಮಾಡಲಾಗುತ್ತೆ?

ಗೃಹ ಇಲಾಖೆಗೆ ಹೋಗಿರೋ ಹಿನ್ನೆಲೆಯಲ್ಲಿ ತನಿಖೆ ಮೊದಲು ಸಿಐಡಿಗೆ ಹೋಗಲಿದೆ. ಹೀಗಾಗಿ ಇಂದು ಸಿಐಡಿ ತನಿಖೆಗೆ ವಹಿಸೋ ಎಲ್ಲಾ ಸಾಧ್ಯತೆಗಳು ಇವೆ. ಇದರ ಬೆನ್ನಲ್ಲೆ ಸಿಐಡಿ ಅಧಿಕಾರಿಗಳು ತನಿಖೆಯನ್ನು ಪ್ರಾರಂಭ ಮಾಡುತ್ತಾರೆ. ಸದ್ಯ ಸಿಎಂ ಯಡಿಯೂರಪ್ಪ ದೆಹಲಿಯಲ್ಲಿ ಇರುವುದರಿಂದ ದೊಡ್ಡ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ಮತ್ತೊಮ್ಮೆ ಕೇಂದ್ರ ಗೃಹ ಸಚಿವರ ಭೇಟಿ ಮಾಡಲಿದ್ದಾರೆ. ಮತ್ತೆ ಫೋನ್ ಕದ್ದಾಲಿಕೆ ಪ್ರಕರಣದ ಸಾಧಕ ಬಾಧಕ ಮನವರಿಕೆ ಮಾಡಲಿದ್ದಾರೆ. ದೆಹಲಿಯಿಂದ ಬಂದ ಬಳಿಕ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸೋ ಸಾಧ್ಯತೆ ಇದೆ.

ರಾಜ್ಯದ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸದಂತೆ ನಗರ ಪೊಲೀಸ್ ಆಯುಕ್ತರು ಕೂಡ ಮನವಿ ಮಾಡಿದ್ದಾರೆ. ರಾಜ್ಯದ ತನಿಖಾ ಸಂಸ್ಥೆಯಿಂದ ತನಿಖೆ ಬೇಡ ಎಂದಿದ್ದಾರೆ. ಇದೆಲ್ಲದರ ಜೊತೆಗೆ ಎಲ್ಲಾ ರಾಜಕಾರಣಿಗಳು ನಮ್ಮ ಮೊಬೈಲ್ ಟ್ಯಾಪ್ ಆಗಿದೆ ಎಂದು ಹೇಳುತ್ತಿದ್ದಾರೆ. ಇದರಿಂದ ಪ್ರಕರಣ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ವಿಧಿ ಇಲ್ಲದೆ ಯಡಿಯೂರಪ್ಪ ಪ್ರಕರಣವನ್ನು ಸಿಬಿಐಗೆ ವಹಿಸೋ ಸಾಧ್ಯತೆ ದಟ್ಟವಾಗಿದೆ ಎಂಬುದಾಗಿ ತಿಳಿದುಬಂದಿದೆ.

Comments

Leave a Reply

Your email address will not be published. Required fields are marked *