ಪುನೀತ್ ಪಾರ್ಕ್ ಹಾಗೂ ಕಲಾಮಂದಿರ ನಿರ್ಮಾಣ: ಸಚಿವ ಆನಂದ್ ಸಿಂಗ್

ವಿಜಯನಗರ: ಜಿಲ್ಲಾ ಕೇಂದ್ರ ಸ್ಥಾನವಾದ ಹೊಸಪೇಟೆಯ ಒಂದು ಸರ್ಕಲ್‍ಗೆ ನಟ ಪುನೀತ್ ರಾಜಕುಮಾರ್ ಹೆಸರು ನಾಮಕರಣ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.

ಹೊಸಪೇಟೆಯ ಶಾಸಕರ ಕಚೇರಿ ಬಳಿ ಪುನೀತ್ ಅಭಿಮಾನಿಗಳ ಮನವಿ ಸ್ವೀಕರಿಸಿ ಮಾತನಾಡಿದ ಅವರು, ವೃತ್ತವೊಂದಕ್ಕೆ ಜನವರಿ ವೇಳೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುವುದು. ಜೊತೆಗೆ ಹೊಸಪೇಟೆ ನಗರದಲ್ಲಿ ಅವರ ಹೆಸರಿನಲ್ಲಿ ಕಲಾಮಂದಿರ ಹಾಗೂ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅಪ್ಪು ನೇತ್ರದಾನದಿಂದ ಇನ್ನೂ 10 ಮಂದಿಗೆ ದೃಷ್ಟಿ ನೀಡಲು ವೈದ್ಯರ ಪ್ರಯತ್ನ!

ಪುನೀತ್ ರಾಜಕುಮಾರ್ ಅವರಿಗೆ ಹೊಸಪೇಟೆಯ ಜೊತೆ ಅವಿನಾಭಾವ ಸಂಬಂಧವಿದೆ. ಹೀಗಾಗಿ ಅವರ ಹೆಸರಿನಲ್ಲಿ ಹೊಸಪೇಟೆಯಲ್ಲಿ ಸರ್ಕಲ್, ಜಿಲ್ಲಾ ಕ್ರೀಡಾಂಗಣ, ಉದ್ಯಾನ, ಕಲಾಮಂದಿರ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದ್ದು, ಜನವರಿ ವೇಳೆಗೆ ಒಂದು ಸರ್ಕಲ್‍ಗೆ ಅವರ ಹೆಸರು ನಾಮಕರಣ ಮಾಡುತ್ತೇವೆ ಎಂದರು. ಇದನ್ನೂ ಓದಿ: ಪುನೀತ್ ಸಮಾಧಿ ಬಳಿ 3 ಅಡಿ ಪುತ್ಥಳಿ ನಿರ್ಮಾಣ – ಪಾರಿವಾಳ ಸಮೇತ ಅಂತಿಮ ಸ್ಪರ್ಶ

ಇದಕ್ಕೂ ಮೊದಲು ಪುನೀತ್ ಅವರ ಅಭಿಮಾನಿಗಳು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಭೆ ನಡೆಸಿ ಬೇಡಿಕೆಗಳ ಕುರಿತು ಚರ್ಚಿಸಿದರು. ನಂತರ ನಗರದ ರಾಣಿಪೇಟೆಯಲ್ಲಿರುವ ಶಾಸಕರ ಕಚೇರಿಗೆ ತೆರಳಿ ಸಚಿವರಿಗೆ ಮನವಿ ಸಲ್ಲಿಸಿದರು.

Comments

Leave a Reply

Your email address will not be published. Required fields are marked *