ಪ್ರಧಾನಿ ಮೋದಿ ಬೇಕಾಬಿಟ್ಟಿಯಾಗಿ ಮಾತನಾಡೋದನ್ನ ಬಿಡ್ಬೇಕು: ಮಲ್ಲಿಕಾರ್ಜುನ್ ಖರ್ಗೆ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಬೇಕಾಬಿಟ್ಟಿಯಾಗಿ ಮಾತನಾಡೋದನ್ನು ಬಿಡಬೇಕೆಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಕಲಬುರಗಿ ಗಂಗಾ ನಗರದಲ್ಲಿ ದಕ್ಷಿಣ ಹಾಗೂ ಉತ್ತರ ಮತಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಖರ್ಗೆ, ಮೋದಿ ತಾವೊಬ್ಬರೇ ಬುದ್ಧಿವಂತ ಅಂತ ಅಂದುಕೊಂಡಿದ್ದಾರೆ. ಅವರಿಗಿಂತ ಬುದ್ಧಿವಂತರು ದೇಶದಲ್ಲಿ ಕೋಟ್ಯಾಂತರ ಜನರಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ಮೋದಿ ಸಾಕಷ್ಟು ಕಲಿಯಬೇಕಾಗಿದೆ ಅಂತ ಸಲಹೆ ನೀಡಿದ್ರು.

ಇದೇ ವೇಳೆ ಕಾಂಗ್ರೆಸ್ ಡೀಲ್ ಪಕ್ಷವೆಂಬ ಬಿಜೆಪಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, ವಿಜಯ್ ಮಲ್ಯ, ನೀರವ್ ಮೋದಿ ಅಂತವರು ದೇಶವನ್ನು ಕೊಳ್ಳೆ ಹೊಡೆದು ಹೋಗಿದ್ದಾರೆ. ದೇಶವನ್ನು ಲೂಟಿ ಮಾಡಿದವರಿಗೆಲ್ಲ ಮೋದಿ ಸಹಾಯ ಮಾಡಿದ್ದಾರೆ ಅಂತಾ ಆರೋಪಿಸಿದ್ರು.

Comments

Leave a Reply

Your email address will not be published. Required fields are marked *