‘ಭಾರತ ರಾಜಕೀಯದ ವೈಭವ ಅಧ್ಯಾಯವೊಂದರ ಅಂತ್ಯ’- ಸುಷ್ಮಾ ಅಗಲಿಕೆಗೆ ಮೋದಿ ಭಾವುಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದ್ಯೋಗಿಯಾಗಿದ್ದ ಸುಷ್ಮಾ ಸ್ವರಾಜ್ ಅವರ ಅಗಲಿಕೆಗೆ ಪ್ರಧಾನಿಗಳು ಸಂತಾಪ ಸೂಚಿಸಿ ಭಾವುಕ ಟ್ವೀಟ್ ಮಾಡಿದ್ದಾರೆ.

ಭಾರತದ ರಾಜಕೀಯದ ವೈಭವಯುತ ಅಧ್ಯಾಯವೊಂದು ಅಂತ್ಯವಾಗಿದೆ ಎಂದು ಹೇಳಿರುವ ಪ್ರಧಾನಿ ಮೋದಿ ಅವರು, ತಮ್ಮ ಬದುಕನ್ನು ಸಾರ್ವಜನಿಕ ಜೀವನಕ್ಕಾಗಿಯೇ ಮುಡಿಪಾಗಿಟ್ಟ, ಬಡವರ ಸೇವೆ ಮಾಡಿದ ನಿಷ್ಠಾವಂತ ನಾಯಕಿ ಸುಷ್ಮಾ ಸ್ವರಾಜ್ ಅವರ ಅಗಲಿಕೆಗೆ ದೇಶವೇ ಕಣ್ಣೀರಿಡುತ್ತಿದೆ. ಸುಷ್ಮಾ ಅವರದ್ದು ಕೋಟಿ ಜನರಿಗೆ ಸ್ಫೂರ್ತಿ ನೀಡುವ ವ್ಯಕ್ತಿತ್ವ ಎಂದಿದ್ದಾರೆ.

ಅಪ್ರತಿಮ ಸಂಸದೀಯ ಪಟುವಾಗಿದ್ದ ಸುಷ್ಮಾ ಅವರು, ಸರ್ಕಾರದ ಸಚಿವರಾಗಿ ಭಾರತದ ಸಂಬಂಧಗಳನ್ನು ಇತರೇ ದೇಶಗಳೊಂದಿಗೆ ಉತ್ತಮವಾಗಿಸಲು ಕಾರ್ಯನಿರ್ವಹಿಸಿದ್ದರು. ಅವರ ಅಗಲಿಕೆಯಿಂದ ನನಗೆ ವೈಯಕ್ತಿಕ ನಷ್ಟವಾಗಿದೆ. ಅವರೊಂದಿಗೆ ಕಾರ್ಯನಿರ್ವಹಿಸಿದ್ದ 5 ವರ್ಷದ ಅವಧಿ ಸ್ಮರಣೀಯವಾಗಿದ್ದು, ಅವರು ಅನಾರೋಗ್ಯದಿಂದಿದ್ದರೂ ಕೂಡ, ತಮ್ಮ ಕಾರ್ಯವನ್ನು ದೇಶಕ್ಕಾಗಿ ಮಾಡುತ್ತಿದ್ದರು ಎಂದು ಪ್ರಧಾನಿ ಮೋದಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

ರಾಹುಲ್ ಸಂತಾಪ: ಸುಷ್ಮಾ ಅವರ ನಿಧನದ ಬಗ್ಗೆ ಕೇಳಿ ನಾನು ಅಘಾತಕ್ಕೆ ಒಳಗಾದೆ. ಸುಷ್ಮಾ ಸ್ವರಾಜ್ ಅವರು ಸಾಧಾರಣ ರಾಜಕೀಯ ನಾಯಕತ್ವ, ಪ್ರಖರ ವಾಗ್ಮಿ, ಉತ್ತಮ ಸಂಸದೀಯ ಪಟುವಾಗಿದ್ದರು. ಅವರನ್ನು ಕಳೆದುಕೊಂಡ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಎರಡೂ ದಶಕಗಳಿಗೂ ಹೆಚ್ಚು ಸಮಯ ರಾಜಕೀಯ ಜೀವನದಲ್ಲಿದ್ದ 67 ವರ್ಷ ವಯಸ್ಸಿನ ಸುಷ್ಮಾ ಸ್ವರಾಜ್ ಅವರು, ಜಮ್ಮು ಕಾಶ್ಮೀರಕ್ಕೆ ನೀಡಿದ್ದ 370ನೇ ವಿಧಿ ರದ್ದುಗೊಳಿಸಿದ್ದ ಮೋದಿ ಸರ್ಕಾರದ ನಡೆಯನ್ನು ಶ್ಲಾಘಿಸಿ ತಮ್ಮ ಅಂತಿಮ ಟ್ವೀಟ್ ಮಾಡಿದ್ದರು. ಅಲ್ಲದೇ ಈ ದಿನಕ್ಕಾಗಿ ನಾನು ಜೀವಮಾನವಿಡೀ ಕಾದಿದ್ದೇ ಎಂದಿದ್ದರು. ಈ ಟ್ವೀಟ್ ಮಾಡಿದ್ದ ಕೆಲ ಗಂಟೆಗಳಲ್ಲೇ ಅವರು ನಿಧನರಾಗಿದ್ದರು.

Comments

Leave a Reply

Your email address will not be published. Required fields are marked *