ಡಿಕೆಶಿಗೆ ತಿಹಾರ್ ಜೈಲೇ ಗತಿ – ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠ ಇಂದು ಡಿಕೆಶಿ  ಕಡೆಯ ವಾದ ಆಲಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದನ್ನು ಪ್ರಶ್ನಿಸಿ ಶಿವಕುಮಾರ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಹಿಂದೆಯೇ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ದಸರಾ ಹಬ್ಬದ ಕಾರಣ ಮುಂದೂಡಲಾಗಿತ್ತು.

ಸೆ. 4ರಿಂದಲೂ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಳಪಡಿಸಲಾಗಿದೆ. ಡಿಕೆಶಿ ಅವರಿಗೆ ಜಾಮೀನು ಸಿಗುವವರೆಗೂ ಡಿಕೆಶಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಿದೆ.

ಇಂದು ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಪೊಲೀಸರು ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಕೋರ್ಟ್ ಮತ್ತೆ 10 ದಿನಗಳ ಕಾಲ ವಿಸ್ತರಣೆ ಮಾಡಿದ್ದು ಅ.25ರವರೆಗೆ ಡಿಕೆ ಶಿವಕುಮಾರ್ ನ್ಯಾಯಾಂಗ ಬಂಧನಲ್ಲೇ ಇರಬೇಕಾಗುತ್ತದೆ.

Comments

Leave a Reply

Your email address will not be published. Required fields are marked *