ನಿಷೇಧಾಜ್ಞೆ ಮಧ್ಯೆಯೂ ಪ್ರತಿಭಟನೆ- ವಿವಿಧ ಸಂಘಟನೆಗಳ ಮುಖಂಡರ ಬಂಧನ

ಹುಬ್ಬಳ್ಳಿ: ಪೌರತ್ವ ಕಾಯ್ದೆ ವಿರೋಧಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ನಿಷೇಧಾಜ್ಞೆ ಮಧ್ಯೆಯೂ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ವಿವಿಧ ಸಂಘಟನೆಗಳ ಸುಮಾರು 10-15 ಜನ ಮುಖಂಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ ಪೊಲೀಸರ ಮಾತು ಕೇಳದೆ ಪ್ರತಿಭಟನೆಗೆ ಮುಂದಾದ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನಿಷೇಧಾಜ್ಞೆ ಮಧ್ಯೆಯೂ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರನ್ನು ತಕ್ಷಣ ಪೊಲೀಸರು ಬಂಧಿಸಿದರು. ಸಿದ್ದು ತೇಜಿ, ರಾಜಶೇಖರ ಮೆಣಸಿನಕಾಯಿ, ಅನ್ವರ ಮುಧೋಳ, ಬಾಬಾಜಾನ ಮುಧೋಳ, ವಿಜಯ ಗುಂಟ್ರಾಳ, ಮಹೇಶ ಪತ್ತಾರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Comments

Leave a Reply

Your email address will not be published. Required fields are marked *