ಡ್ರಾಗರ್‍ನಿಂದ ಇರಿದು ಎಸ್ಕೇಪ್ ಆಗಲು ರೌಡಿ ಯತ್ನ-ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ಫೈರಿಂಗ್

ಬೆಂಗಳೂರು: ನಗರದಲ್ಲಿ ರೌಡಿ ಕಾಲಿಗೆ ಗುಂಡೇಟು ಬಿದ್ದಿದೆ. ಶನಿವಾರ ರಾತ್ರಿ ಹಲಸೂರು ಕೆರೆಯ ಗುರುದ್ವಾರದ ಬಳಿ ಬೈಕ್‍ನಲ್ಲಿ ಬರುತ್ತಿದ್ದ ರೌಡಿಶೀಟರ್ ಕಾರ್ತಿಕ್‍ ನನ್ನು ಪೊಲೀಸ್ ಪೇದೆ ಬಸವರಾಜ್ ಬನ್ಕರ್ ತಡೆದಿದ್ದಾರೆ.

ಈ ವೇಳೆ ರೌಡಿಶೀಟರ್ ಪೊಲೀಸರಿಗೆ ಡ್ರಾಗರ್‍ನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಜೊತೆಗಿದ್ದ ಇನ್ಸ್ ಪೆಕ್ಟರ್ ಸುಬ್ರಹ್ಮಣ್ಯ ಆತನ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿಕಟ್ಟಿದ್ರು.

ಸದ್ಯ ಗಾಯಾಳು ರೌಡಿಶೀಟರ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೌಡಿಶೀಟರ್ ಕಾರ್ತಿಕ್ ರೇಪ್ ಕೇಸ್‍ನಲ್ಲಿ ಏಳು ವರ್ಷ ಶಿಕ್ಷೆ ಅನುಭವಿಸಿದ್ದಾನೆ. ಅಲ್ಲದೇ ಈತನ ವಿರುದ್ಧ ಕಲಾಸಿಪಾಳ್ಯದಲ್ಲಿ ನಾಲ್ಕು ಪ್ರಕರಣಗಳಿತ್ತು ಅಂತ ತಿಳಿದುಬಂದಿದೆ.

Comments

Leave a Reply

Your email address will not be published. Required fields are marked *