ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಮೊರೆತ- ಜೈಲಿನಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು

ಕಲಬುರಗಿ: ಜೈಲಿನಿಂದ ಪರಾರಿಯಾಗಿದ್ದ ಕೈದಿ ಮೇಲೆ ಪೊಲೀಸರು ಗುಂಡೇಟು ನೀಡಿದ ಘಟನೆ ಕಲಬುರಗಿ ನಗರದ ಹೊರವಲಯದ ನಾಗನಹಳ್ಳಿ ಬಳಿ ನಡೆದಿದೆ.

ತಾಜುದ್ದೀನ್ ಎಂಬ ಕೈದಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈತ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದು, ಕಳೆದ ಮಾರ್ಚ್‍ನಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದನು. ಹೀಗಾಗಿ ಪೊಳಿಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಕೈದಿ ಸಿಕ್ಕಿದ ಕೂಡಲೇ ಆತನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಕೈದಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಸದ್ಯ ಗಾಯಾಳು ಕೈದಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಘುವೀರ್ ಹಲ್ಲೆಗೆ ಒಳಗಾದ ಪೊಲೀಸ್ ಪೇದೆಯಾಗಿದ್ದು, ಇವರು ಫರ್ತಾಬಾದ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಗಾಯಗೊಂಡ ಪೊಲೀಸ್ ಪೇದೆಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Comments

Leave a Reply

Your email address will not be published. Required fields are marked *