ಹೃದಯಾಘಾತದಿಂದ ಇನ್ಸ್‌ಪೆಕ್ಟರ್‌ ನಿಧನ

ಬೆಂಗಳೂರು: ನಗರದ ವಿವಿಧ ಠಾಣೆಗಳಲ್ಲಿ ಕೆಲಸ ನಿರ್ವಹಿಸಿದ್ದ ಇನ್ಸ್‌ಪೆಕ್ಟರ್‌ ಒಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಠಾಣೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಮ್ಮದ್ ರಫೀಕ್ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಇಂದು ರಫೀಕ್ ಎಂದಿನಂತೆ ಬೆಳಗ್ಗೆ ಎದ್ದು ಸ್ಥಾನಕ್ಕೆ ತೆರಳಿದಾಗ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ವೈದ್ಯರನ್ನು ಮನೆಗೆ ಕರೆಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ರಫೀಕ್ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇದನ್ನೂ ಓದಿ: ಮಂಡ್ಯದಲ್ಲಿ ಎಸ್‍ಪಿ ವರ್ಗಾವಣೆ ವಾರ್ – ರಾಜಕೀಯ ಪ್ರಭಾವಿಗಳ ಒತ್ತಡ ಆರೋಪ

ನಗರದ ವಿವಿಧ ಠಾಣೆಗಳಲ್ಲಿ ಕೆಲಸ ಮಾಡಿದ್ದ ಮಹಮ್ಮದ್ ರಫೀಕ್ ಸ್ನೇಹ ಜೀವಿಯಾಗಿದ್ದರು. ರಫೀಕ್ ಇತ್ತೀಚೆಗೆ ಖಾಸಗಿ ಚಾನಲ್ ಒಂದರಲ್ಲಿ ಹಾಡುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್‌ ಸುಬ್ರಹ್ಮಣಿ ಜೊತೆ ಶೋ ಒಂದರಲ್ಲಿ ಭಾಗವಹಿಸಿದ್ದರು. ಅಲ್ಲದೆ, ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಗೋವುಗಳಿಗೆ ರಕ್ಷಣೆ ನೀಡಿ ಅವುಗಳಿಗೆ ಆಹಾರ ನೀಡಿ ಆರೈಕೆ ಮಾಡುತ್ತಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕರುವೊಂದನ್ನು ಸಾಕುತ್ತಿದ್ದರು. ಆ ಬಳಿಕ ವರ್ಗಾವಣೆಗೊಂಡಾಗ ಆ ಕರುವನ್ನು ಜೊತೆಯಲ್ಲೇ ಕರೆದೊಯ್ದು ಪ್ರಾಣಿ ಪ್ರೀತಿ ತೋರಿಸಿದ್ದರು. ಇದನ್ನೂ ಓದಿ: ಭಾರತದ ಐತಿಹಾಸಿಕ ಸಾಧನೆ- ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ವಿತರಿಸಲಾಗಿದೆ?

Comments

Leave a Reply

Your email address will not be published. Required fields are marked *