ಕೊಡಗಿನ ಪೊಲೀಸ್ ಅಧಿಕಾರಿ ನಾಪತ್ತೆ – ಕುಟುಂಬಸ್ಥರಿಂದ ದೂರು ದಾಖಲು

ಮಡಿಕೇರಿ: ಕಳೆದ ಎರಡು ದಿನಗಳಿಂದ ಪೊಲೀಸ್ ಎಎಸ್‌ಐಯೋರ್ವರು ನಾಪತ್ತೆಯಾಗಿದ್ದು, ಕುಟುಂಬ ಸದಸ್ಯರು ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನಲ್ಲಿ ನಡೆದಿದೆ.

ಕುಶಾಲನಗರ ಸಂಚಾರಿ ಪೊಲೀಸ್ ಎಎಸ್‌ಐ ಸುರೇಶ್ (51) ನಾಪತ್ತೆಯಾದ ಪೊಲೀಸ್ ಅಧಿಕಾರಿ. ಸುರೇಶ್ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಷ್ಟೇ ಅಲ್ಲದೇ ಕುಶಾಲನಗರದಲ್ಲಿ ಇರುವ ಪೊಲೀಸ್ ಕ್ವಾಟರ್ಸ್‌ಗೆ ಬೀಗ ಹಾಕಿ ಸುರೇಶ್ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ನಿಟ್ಟಿನಲ್ಲಿ ಕುಶಾಲನಗರ ಪೊಲೀಸರು ಹಾಗೂ ಸಹೋದ್ಯೋಗಿಗಳು ಸುರೇಶ್ ಅವರ ಫೋನ್‌ನ ಟವರ್ ಲೊಕೇಶನ್ ಅನ್ನು ಪರಿಶೀಲಿಸಿದಾಗ ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯಲ್ಲಿ ಎಂಬಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರೇಶ್ ಅವರಿಗೆ ಹುಡುಕಾಟದಲ್ಲಿ ನಡೆಸಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ಮುಂದೆ ಎರಡು ಕುಟುಂಬಗಳ ನಡುವೆ ಮಾರಾಮಾರಿ

ಸುರೇಶ್ ಅವರು ಕಾಣೆಯಾಗಿರುವ ಬೆನ್ನಲ್ಲೇ ಸುರೇಶ್ ಪತ್ನಿಗೆ ವಿಷಯ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಶೋಭಾ ಕುಶಾಲನಗರದ ಪೊಲೀಸ್ ಠಾಣೆಗೆ ದೂರು ನೀಡಿ ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ. ಶೋಭಾ ಅವರು ಸದ್ಯ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಮನೆಗಾಗಿ ವ್ಯಕ್ತಿಯೊಬ್ಬ ಹೈಟೆನ್ಷನ್ ವಿದ್ಯುತ್‌ ಕಂಬ ಏರಿ ಪ್ರತಿಭಟಿಸಿದ

POLICE JEEP

ಮೂಲತಃ ಸುರೇಶ್ ಅವರು ಹಾಸನ ಜಿಲ್ಲೆಯ ಕೊಣನೂರಿನವರಾಗಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಲ್ಲದೆ ಸಾಕಷ್ಟು ರಜೆ ಹಾಕುತ್ತಿದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಪ್ರಕರಣವನ್ನು ಕುಶಾಲನಗರ ಪೊಲೀಸರು ದಾಖಲು ಮಾಡಿಕೊಂಡು ನಾಪತ್ತೆಯಾಗಿರುವ ಸುರೇಶ್ ಅವರ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

Comments

Leave a Reply

Your email address will not be published. Required fields are marked *