ಸಿಬಿಐ ವಶಪಡಿಸಿದ್ದ ಕಬ್ಬಿಣದ ಅದಿರನ್ನೇ ಕದ್ದ ಚೋರ – ಏಳು ಲಾರಿಗಳಲ್ಲಿ ಲೂಟಿ

ಬಳ್ಳಾರಿ: ಸಿಬಿಐ ಅಧಿಕಾರಿಗಳು ಜಪ್ತಿ ಮಾಡಿದ್ದ ಅದಿರನ್ನ ಅಕ್ರಮವಾಗಿ ಕಳ್ಳಸಾಗಾಣೆ ಮಾಡುತ್ತಿದ್ದ ಪ್ರಕರಣವೊಂದು ಬಳ್ಳಾರಿಯಲ್ಲಿ ಬಯಲಿದೆ ಬಂದಿದೆ.

ಈ ಹಿಂದೆ ಅಕ್ರಮ ಗಣಿಗಾರಿಕೆ ಮಾಡಿದ್ದ ಅದಿರನ್ನ ಸಿಬಿಐ ಅಧಿಕಾರಿಗಳು ಜಪ್ತಿ ಮಾಡಿ ಸೀಜ್ ಮಾಡಿದ್ದರು. ಆದ್ರೆ ಹೊಸಪೇಟೆ ಮೂಲದ ಲುಂಗಿನಾಯ್ಕ್ ಹಾಗೂ ಕೆಲ ಖದೀಮರು ಸಿಬಿಐ ಜಪ್ತಿ ಮಾಡಿದ್ದ ಅದಿರನ್ನ ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದರು.

ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ದಾಳಿ ನಡೆಸಿದ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರ ದಾಳಿ ನಡೆಸಿ ಏಳು ಲಾರಿಗಳಲ್ಲಿ ಕಳ್ಳ ಸಾಗಾಣೆ ಮಾಡುತ್ತಿದ್ದ ಅದಿರು ಹಾಗೂ ಲಾರಿಗಳನ್ನ ಜಪ್ತಿ ಮಾಡಿ ವಶಪಡಿಸಿಕೊಂಡಿದ್ದಾರೆ. ಅದಿರನ್ನು ಸತತವಾಗಿ ಕದ್ದು ಮಾರಾಟ ಮಾಡುತ್ತಿದ್ದ ಖದೀಮರು, ಆಂಧ್ರ ಹಾಗೂ ತೆಲಂಗಾಣ ಪಾಸಿಂಗ್ ನಂಬರ್ ಹೊಂದಿರುವ ಲಾರಿಗಳಲ್ಲಿ ಅದಿರನ್ನ ಸಾಗಾಟ ಮಾಡುತ್ತಿದ್ದರು. ಹೀಗಾಗಿ ಏಳು ಲಾರಿಗಳ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹೊಸಪೇಟೆ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *