ಬಾಲಕನನ್ನು ಕಿಡ್ನಾಪ್ ಮಾಡಿ, 50 ಲಕ್ಷ ಬೇಡಿಕೆಯಿಟ್ಟು ಗುಂಡೇಟು ತಿಂದ

ಬೆಂಗಳೂರು: ಕಿಡ್ನಾಪ್ ಮಾಡಿ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಮೇಲೆ ಹೆಣ್ಣೂರಿನ ಸಾರಾಯಿಪಾಳ್ಯ ಬಳಿ ಪೊಲೀಸರು ಗುಂಡು ಹಾರಿಸಿದ್ದಾರೆ.

ಶನಿವಾರ ಮಧ್ಯಹ್ನ 2 ಗಂಟೆ ಸುಮಾರಿಗೆ 15 ವರ್ಷದ ಬಾಲಕನನ್ನು ಆರೋಪಿ ಮುಬಾರಕ್ ಸೇರಿ ಮೂವರು ಕಿಡ್ನಾಪ್ ಮಾಡಿದ್ದರು. ಬಳಿಕ ಬಾಲಕನ ಪೋಷಕರಿಗೆ ಕರೆ ಮಾಡಿ 50 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಸಂಜೆ 5:30ರ ವೇಳೆಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು.

ಆರೋಪಿಗಳನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಗ್ಯಾಂಗ್ ಹಲ್ಲೆ ಮಾಡಿತ್ತು. ಬಾಣಸವಾಡಿ ಪೊಲೀಸ್ ಪೇದೆ ನಾಯಕ್ ಅವರಿಗೆ ಆರೋಪಿಗಳು ಚಾಕು ಇರಿದಿದ್ದರು. ಈ ವೇಳೆ ಆತ್ಮ ರಕ್ಷಣೆಗಾಗಿ ಪೊಲೀಸರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಹಾಗೆಯೇ ತಪ್ಪಿಸಿಕೊಂಡು ಹೋಗುತ್ತಿದ್ದ ಮುಬಾರಕ್ ಕಾಲಿಗೆ ಕೆ.ಜಿ ಹಳ್ಳಿ ಇನ್ಸ್‌ಪೆಕ್ಟರ್ ಅಜಯ್ ಸಾರತಿ ಅವರು ಗುಂಡು ಹೊಡೆದು, ಬಾಲಕನನ್ನು ರಕ್ಷಿಸಿದರು.

ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಗುಂಡೇಟು ತಿಂದ ಮುಬಾರಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಬಾಲಕನನ್ನು ಪೊಲೀಸರು ಸುರಕ್ಷಿತವಾಗಿ ಪೋಷಕರ ಬಳಿ ತಲುಪಿಸಿದ್ದಾರೆ.

Comments

Leave a Reply

Your email address will not be published. Required fields are marked *