ಚಿಕ್ಕಬಳ್ಳಾಪುರದಲ್ಲಿ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಪೇದೆ!

ಚಿಕ್ಕಬಳ್ಳಾಪುರ: ಗ್ರಾನೈಟ್ ಫ್ಯಾಕ್ಟರಿ ಮ್ಯಾನೇಜರ್ ಬಳಿಯಿಂದ ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆಯೋರ್ವರು ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚಂದ್ರಶೇಖರ್ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಪೇದೆ. ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಿಬ್ಬೂರಹಳ್ಳಿ- ಸಾದಲಿ ಮಾರ್ಗದ ನಡುವೆ ಇರುವ ವಿಶಾಲಾಕ್ಷಿ ಸ್ಟೋನ್ ಆರ್ಟ್ ಗ್ರಾನೈಟ್ ಫ್ಯಾಕ್ಟರಿ ಮ್ಯಾನೇಜರ್ ಶಂಕರ್ ಎಂಬವರ ಬಳಿ 40,000 ಹಣಕ್ಕೆ ಪೇದೆ ಚಂದ್ರಶೇಖರ್ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪೇದೆ ಫ್ಯಾಕ್ಟರಿ ಮುಂಭಾಗ ಹಣ ಪಡೆಯುವಾಗ ರೆಡ್ ಹ್ಯಾಂಡಾಗಿ ಚಿಕ್ಕಬಳ್ಳಾಪುರ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *