ಟಾಕಳೆ ವಿರುದ್ಧ ಕೈ ಕಾರ್ಯಕರ್ತೆ ಅತ್ಯಾಚಾರ ಆರೋಪ – ನವ್ಯಶ್ರೀ ವೈದ್ಯಕೀಯ ತಪಾಸಣೆಗೆ ಕರೆದೊಯ್ದ ಪೊಲೀಸ್

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ಆರ್.ರಾವ್ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಅವರ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನವ್ಯಶ್ರೀ, ಟಾಕಳೆ ವಿರುದ್ಧ ಅತ್ಯಾಚಾರ ಆರೋಪ ಮಾಡಲಾಗಿದ್ದು, ಆಕೆಯನ್ನು ಎಪಿಎಂಸಿ ಪೊಲೀಸರು ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ.

ಬೆಳಗಾವಿಯ ಎಪಿಎಂಸಿ ಠಾಣೆಯಿಂದ ಕರೆದುಕೊಂಡು ಹೋದ ಪೊಲೀಸರು ಬಿಮ್ಸ್ ಆಸ್ಪತ್ರೆಯಲ್ಲಿ ನವ್ಯಶ್ರೀ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ನವ್ಯಶ್ರೀ, ರಾಜಕುಮಾರ ಟಾಕಳೆ ವಿರುದ್ಧ ಅತ್ಯಾಚಾರ ಹಾಗೂ ಗರ್ಭಪಾತದ ಆರೋಪ ಮಾಡಿದ್ದರು. ಅವರ ದೂರಿನ ಮೇರೆಗೆ ವೈದ್ಯಕೀಯ ತಪಾಸಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಳಿಯ, ನಟ ರಣವೀರ್ ಸಿಂಗ್ ಬೆತ್ತಲೆ ಪ್ರಕರಣ : ಮುಂಬೈನಲ್ಲಿ ದೂರು ದಾಖಲು

ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ನವ್ಯಶ್ರೀ, ನನ್ನ ಅಶ್ಲೀಲ ಸಿಡಿ ವೈರಲ್ ಮಾಡಿಸಿದ ಆ ನಾಯಕ ಯಾರು ಎಂಬುದು ತನಿಖೆ ಮೂಲಕ ಬಯಲಾಗುತ್ತದೆ. ಅದಾದ್ಮೇಲೆ ನಾನೇ ಮಾಧ್ಯಮಗಳ ಮುಂದೆ ಬರುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಂಪು ಸಮುದ್ರದ ತಳಭಾಗದಲ್ಲೊಂದು ಡೆಡ್ಲಿ ಪೂಲ್ – ಇಲ್ಲಿ ಈಜುವ ಪ್ರತಿ ಜೀವಿಗೂ ಕಾದಿದೆ ಅಪಾಯ

ಈಗ ಟಾಕಳೆ ವಿರುದ್ಧ ದೂರು ನೀಡಿದ್ದೇನೆ. ಹೀಗಾಗಿ ವೈದ್ಯಕೀಯ ತಪಾಸಣೆ, ಸ್ಥಳ ಮಹಜರು ಮಾಡಬೇಕಾಗಿದೆ. ಪೊಲೀಸರ ತನಿಖೆಗೆ ಸಹಕಾರ ನೀಡುವ ಕೆಲಸ ಮೊದಲು ಮಾಡಬೇಕಾಗಿದೆ. ನಾನು ಏನು ವಿಚಾರ ಹೇಳಿದ್ದೀನಿ ಮುಂದಿನ ದಿನಗಳಲ್ಲಿ ಬಂದು ಖುದ್ದಾಗಿ ಮಾತನಾಡುತ್ತೇನೆ. ಮೊದಲು ಈ ತನಿಖೆ ಆಗಬೇಕು. ನಾವೆಲ್ಲ ಒಟ್ಟಾಗಿ ಸೇರಿ ಒಂದು ಸತ್ಯ ಬಯಲಿಗೆ ಎಳೆಯುವಂತ ಕೆಲಸ ಮಾಡಬೇಕಿದೆ. ಶಿಕ್ಷೆ ಕೊಡಿಸಬೇಕಿದೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *