ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳಿಸಿ ಸಿಕ್ಕಿಬಿದ್ದ ಪೊಲಿಟಿಕಲ್ ಮೇಷ್ಟ್ರು ಎಸ್ಕೇಪ್

ಮಂಗಳೂರು: ಗುರು ದೇವೋಭವ ಎಂಬ ಮಾತಿದೆ, ಅದಕ್ಕಾಗಿ ಗುರುವನ್ನು ಶ್ರೇಷ್ಠ ಭಾವನೆಯಿಂದ ಕಾಣುತ್ತಾರೆ. ಆದ್ರೆ ಅದೇ ಗುರು ಕೀಚಕನಾದ್ರೆ ಎಂತಹ ಅಸಹ್ಯ ಅಲ್ವಾ?. ಹೌದು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕಾಲೇಜಿನ ಪ್ರಾಧ್ಯಾಪಕನೊಬ್ಬನ ಲಫಂಗತನ ಇದೀಗ ಬಯಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಹದಿನೈದು ವರ್ಷಗಳಿಂದ ರಾಜಕೀಯ ಶಾಸ್ತ್ರದ ಪ್ರಾಧ್ಯಾಪಕನಾಗಿರುವ ಪುಷ್ಪರಾಜ್ ಕೆ ವಿದ್ಯಾರ್ಥಿನಿಗೆ ಅಸಹ್ಯವಾದ ಸಂದೇಶ ಕಳುಹಿಸಿದ್ದಾನೆ. ಫೇಸ್ ಬುಕ್ ಮೆಸೇಂಜರ್ ನಲ್ಲಿ ವಿದ್ಯಾರ್ಥಿನಿ ಗೆ ಅಶ್ಲೀಲ ಮೆಸೇಜ್ ಗಳನ್ನು ಪೋಲಿ ಲೆಕ್ಚರ್ ಕಳುಹಿಸಿದ್ದು, ಇದೀಗ ಗುರುವಿನ ಉಪಟಳ ತಡೆಯಲಾರದೆ ಸಂತ್ರಸ್ತ ವಿದ್ಯಾರ್ಥಿನಿ ಪುಷ್ಪರಾಜನ ಕಾಮ ಪುರಾಣವನ್ನು ಬಯಲು ಮಾಡಿದ್ದಾಳೆ.

ತನ್ನ ಕಾಮಕಾಂಡ ಬಯಲಾಗುತ್ತಿದ್ದಂತೆಯೇ ಪುಷ್ಪರಾಜ್ ಕಾಲೇಜಿಗೆ ರಜೆ ಹಾಕಿದ್ದು, ಪ್ರಾಧ್ಯಾಪಕ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದಾನೆ ಎಂದು ತಿಳಿದುಬಂದಿದೆ. ಗುರುವೇ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

 

Comments

Leave a Reply

Your email address will not be published. Required fields are marked *