ಮದ್ಯಪಾನ ಸೇವಿಸಿ ಕರ್ತವ್ಯಕ್ಕೆ ಹಾಜರ್ – ಅಧಿಕಾರಿಯನ್ನು ಅಮಾನತುಗೊಳಿಸಿದ ಪ್ರಭು ಚವ್ಹಾಣ್

– ಪಶು ವೈದ್ಯಕೀಯ ಕಚೇರಿಗೆ ದಿಢೀರ್ ಭೇಟಿ
– ಅಧಿಕಾರಿಗಳಿಗೆ ಸಚಿವರ ಫುಲ್ ಕ್ಲಾಸ್

ಬೀದರ್: ಜಿಲ್ಲೆಯ ಶಾಹಗಾಂಜ್‍ನಲ್ಲಿರುವ ಪಶು ವೈದ್ಯಕೀಯ ಕಚೇರಿಗೆ ದಿಢೀರ್ ಭೇಟಿ ನೀಡಿದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗುಟ್ಕಾ, ಮದ್ಯಪಾನ ಸೇವಿಸಿ ಕರ್ತವ್ಯಕ್ಕೆ ಬಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಪ್ರಕಟಿಸಿದ್ದಾರೆ.

ಇಂದು ಶಾಹಗಾಂಜ್‍ನಲ್ಲಿರುವ ಪಶು ವೈದ್ಯಕೀಯ ಕಚೇರಿಗೆ ಪ್ರಭು ಚವ್ಹಾಣ್ ಅವರು ದಿಢೀರ್ ಭೇಟಿ ನೀಡಿದ್ದರು. ಈ ಬಗ್ಗೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇಲ್ಲದ ಕಾರಣಕ್ಕೆ ಸಚಿವರನ್ನು ಕಂಡು ಕಂಗಾಲಾಗಿದ್ದಾರೆ. ಕಚೇರಿಯಲ್ಲಿ ಸ್ವಚ್ಛತೆ ಕಾಪಾಡದೇ ಕರ್ತವ್ಯ ಲೋಪ ಎಸೆಗಿದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಈ ವೇಳೆ ಜಾನುವಾರು ಅಭಿವೃದ್ಧಿ ಅಧಿಕಾರಿ ಎನ್. ಗಾಂಧಿ ಹಾಗೂ ಡಿ ಗ್ರೂಪ್ ನೌಕರ ಬಾಬು ಗುಟ್ಕಾ ಹಾಗೂ ಮದ್ಯಪಾನ ಸೇವಿಸಿ ಕರ್ತವ್ಯಕ್ಕೆ ಬಂದಿದ್ದರು. ಇವರನ್ನು ಗಮನಿಸಿದ ಸಚಿವರು ಇಬ್ಬರನ್ನು ಅಮಾನತುಗೊಳಿಸುವಂತೆ ಆದೇಶ ನೀಡಿದ್ದಾರೆ.

ಕೆಲಸಕ್ಕೆ ಗೈರಾದ ಅಧಿಕಾರಿಗಳಿಗೂ ಫುಲ್ ಕ್ಲಾಸ್ ತೆಗೆದುಕೊಳ್ಳಲಾಗಿದೆ. ಕೆಲಸಕ್ಕೆ ಹಾಜರಾಗದ 6ಕ್ಕೂ ಹೆಚ್ಚು ಅಧಿಕಾರಿಗಳ ಹೆಸರನ್ನು ಪಡೆದು ಅವರ ಮೇಲೆ ಕ್ರಮ ತೆಗದುಕೊಳ್ಳುವುದಾಗಿ ಸಚಿವರು ಹೇಳಿದ್ದಾರೆ. ಅಲ್ಲದೆ ಕರ್ತವ್ಯ ಲೋಪ ಮಾಡುವ ಸಿಬ್ಬಂದಿ ಅಥವಾ ಅಧಿಕಾರಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *