ಮೈಸೂರು: ನಾನು ನನ್ನ ಮಗಳ ಬಗ್ಗೆ ಯೋಚನೆ ಮಾಡಿಲ್ಲ, ಜನಸೇವೆ ಬಗ್ಗೆ ಯೋಚನೆ ಮಾಡ್ತೀನಿ. ಆದ್ರೆ ಕೆಲವರು ಮಕ್ಕಳು, ಮರಿಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡ್ತಾರೆ ಅಂತ ಸಂಸದ ಪ್ರತಾಪ್ ಸಿಂಹ ಅವರು ಪರೋಕ್ಷವಾಗಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣಕ್ಕೆ ಟಾಂಗ್ ಕೊಟ್ಟಿದ್ದಾರೆ.
ಜಿಲ್ಲೆಯಲ್ಲಿ ನಡೆದ ರೈಲ್ವೇ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ನನ್ನ ಮಗಳ ಬಗ್ಗೆ ಯೋಚನೆ ಮಾಡಲ್ಲ. ಆದ್ರೆ ಕೆಲವರು ಮಕ್ಕಳು, ಮರಿಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡ್ತಾರೆ. ನಾನು ಮೈಸೂರಿನ ಜನತೆ ಬಗ್ಗೆ ಯೋಚನೆ ಮಾಡುತ್ತೇನೆ. ನಾನು ಬೇರೆ ರಾಜಕಾರಣಿಗಳಂತೆ ಕಮಿಷನ್ ವ್ಯವಹಾರ ಮಾಡಲ್ಲ. ನಾನು ಜನ ಸೇವೆ ಮಾಡಲು ಬಂದಿದ್ದೇನೆ. ಬೇರೆ ಯಾವ ರಾಜಕಾರಣಿಗಳು ಮಾಡದ ಜನಪರ ಕೆಲಸಗಳನ್ನು ಮಾಡಿದ್ದೇನೆ ಎಂದು ಹೇಳಿದ್ದಾರೆ.

ಉಮೇಶ್ ಜಾಧವ್ ಬಿಜೆಪಿ ಬರುವುದು ಅಪರೇಷನ್ ಕಮಲ ಅಲ್ಲ. ಆಪರೇಷನ್ ನಡೆಯುವುದು ಕೆ.ಆರ್.ಆಸ್ಪತ್ರೆಯಲ್ಲಿ. ಜಾಧವ್ ಅವರು ಬಿಜೆಪಿ ಸೇರುತ್ತಿರುವುದು ಮೋದಿಯವರ ಅಭಿವೃದ್ಧಿ ಕಾರ್ಯ ನೋಡಿ ಎಂದು ತಿಳಿಸಿದ್ದಾರೆ.
ನನ್ನ ಎದುರಾಳಿ ಯಾರು ಎಂಬುದನ್ನು ನೋಡಲ್ಲ. ನಾನು ನಾಲ್ಕೂವರೆ ವರ್ಷ ಮಾಡಿದ ಅಭಿವೃದ್ಧಿ ಕೆಲಸವನ್ನ ಜನರು ನೋಡಿದ್ದಾರೆ. ನನ್ನ ಅಭಿವೃದ್ಧಿ ಕಾರ್ಯ ಜನರು ನೋಡಿ ಮತಹಾಕುತ್ತಾರೆ ಎಂದು ಪ್ರತಾಪ್ ಸಿಂಹ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply