ಪುಸ್ತಕ ಲೋಕಾರ್ಪಣೆಗೆ ಮುನ್ನವೇ ಜಾಫರ್ ವಿಧಿವಶ- ಮಾಜಿ ರಾಷ್ಟ್ರಪತಿ ಆಗಮನ

ಬೆಂಗಳೂರು: ಕಳೆದ ಭಾನುವಾರ ನಿಧನರಾದ ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ ಅವರ ನಿವಾಸಕ್ಕೆ ಇಂದು ಮಧ್ಯಾಹ್ನ 3 ಗಂಟೆಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ ನೀಡಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ.

ಮೌಲಾನ ಅಬ್ದುಲ್ ಕಲಾಮ್ ಆಝಾದ್ ಅವರ `ಇಂಡಿಯಾ ವಿನ್ಸ್ ಫ್ರೀಡಂ’ ಆಂಗ್ಲ ಕೃತಿಯನ್ನು ಜಾಫರ್ ಶರೀಫ್ ಉರ್ದು ಭಾಷೆಗೆ ತರ್ಜುಮೆ ಮಾಡಿಸಿದ್ದರು. ಆ ಪುಸ್ತಕದ ಲೋಕಾರ್ಪಣೆ ಸಮಾರಂಭವನ್ನು ನ.28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿತ್ತು. ಪ್ರಣವ್ ಮುಖರ್ಜಿಯನ್ನು ಪುಸ್ತಕದ ಲೋಕಾರ್ಪಣೆಗೆ ಆಹ್ವಾನ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್ ಪುಸ್ತಕದ ಲೋಕಾರ್ಪಣೆಗೆ ಮುನ್ನ ಜಾಫರ್ ಶರೀಫ್ ಇಹಲೋಕ ತ್ಯಜಿಸಿದರು.

ಈ ಹಿನ್ನೆಲೆಯಲ್ಲಿ ಪೂರ್ವ ನಿಗದಿಯಂತೆ ಪ್ರಣವ್ ಮುಖರ್ಜಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಜಾಫರ್ ಶರೀಫ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಝಮೀರ್ ಅಹ್ಮದ್ ಖಾನ್, ವಿಧಾನಪರಿಷತ್ ಸದಸ್ಯರಾದ ನಸೀರ್ ಅಹ್ಮದ್, ಸಿ.ಎಂ.ಇಬ್ರಾಹೀಂ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿರಲಿದ್ದಾರೆ ಎಂದು ಜಾಫರ್ ಶರೀಫ್ ಕುಟುಂಬದ ಮೂಲಗಳು ತಿಳಿಸಿವೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *