ಪ್ರಧಾನಿ ಅಭ್ಯರ್ಥಿ ಹುಚ್ಚನಾಗಿರಬಾರದು – ರಾಹುಲ್ ಗಾಂಧಿಗೆ ಸಂಸದ ಬಸವರಾಜು ಟಾಂಗ್

ತುಮಕೂರು: ಪ್ರಧಾನಿ ಅಭ್ಯರ್ಥಿ ಭಾರತೀಯ ಪ್ರಜೆಯಾಗಿರಬೇಕು, ಹುಚ್ಚನಾಗಿರಬಾರದು ಎಂದು ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಪುಲ್ವಾಮಾ ದಾಳಿಯಿಂದ ಯಾರಿಗೆ ಲಾಭವಾಯ್ತು ಎಂಬ ರಾಹುಲ್ ಗಾಂಧಿ ಟ್ವೀಟ್ ಅನ್ನು ಜಿ.ಎಸ್ ಬಸವರಾಜು ಖಂಡಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರು ಮುಂದಿನ ಪ್ರಧಾನಿ ಅಭ್ಯರ್ಥಿ ಈ ರೀತಿಯ ಹೇಳಿಕೆ ಕೊಟ್ಟಿದ್ದಾರಲ್ಲ ಎಂದು ಜಿ.ಎಸ್ ಬಸವರಾಜು ಅವರನ್ನು ಪ್ರಶ್ನಿಸಿದರು.  ಇದನ್ನೂ ಓದಿ: ಪುಲ್ವಾಮಾ ದಾಳಿಯಿಂದ ಲಾಭ ಆಗಿದ್ದು ಯಾರಿಗೆ: ರಾಹುಲ್ ಗಾಂಧಿ ಪ್ರಶ್ನೆ

ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿ.ಎಸ್ ಬಸವರಾಜು, ಪ್ರಧಾನಿ ಆಗುವವರಿಗೂ ಅರ್ಹತಾ ಮಟ್ಟ ಇದೆ. ನನಗೂ ಪ್ರಧಾನಿ ಆಗಬೇಕೆಂಬ ಚಟ ಇದೆ. ಪ್ರಧಾನಿ ಅಭ್ಯರ್ಥಿ ಭಾರತೀಯನಾಗಿರಬೇಕು ಹೊರತು ಹುಚ್ಚನಾಗಿರಬಾರದು ಎಂದು ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ. ಅಲ್ಲದೆ ಪುಲ್ವಾಮಾ ದಾಳಿ ರಾಹುಲ್ ಗಾಂಧಿಯೇ ಮಾಡಿಸಿರಬೇಕು ಸೈದ್ಧಾಂತಿಕ ಬದ್ಧತೆ, ಸೈದಾಂತಿಕ ಅರಿವು ಇದ್ದವರಿಗೆ ಏನಾದರೂ ಹೇಳಬಹುದು, ಆದರೆ ರಾಹುಲ್ ಗಾಂಧಿಗೆ ಅದ್ಯಾವುದೂ ಇಲ್ಲ ಎಂದರು.

ನಾನು ಕಾಂಗ್ರೆಸ್ಸಿನಲ್ಲಿ ಇದ್ದವನು. ಒಳ್ಳೆಯವರು ಯಾರು ಈಗ ಕಾಂಗ್ರೆಸ್ಸಿನಲ್ಲಿ ಇಲ್ಲ. ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳುವಂತೆ ಈಗ ಕಾಂಗ್ರೆಸ್ಸಿನಲ್ಲಿ ಕೇವಲ ಕಳ್ಳರೇ ತುಂಬಿಕೊಂಡಿದ್ದಾರೆ ಎಂದು ಆರೋಪಿಸಿದರು.

Comments

Leave a Reply

Your email address will not be published. Required fields are marked *