ಕೊಪ್ಪಳ: ಜಿಲ್ಲಾ ಕಾರಾಗೃಹದಲ್ಲಿ ಮಹಿಳಾ ವಿಚಾರಣಾ ಕೈದಿಯ ಮಗುವಿನ ನಾಮಕರಣ ಹಾಗೂ ಹುಟ್ಟುಹಬ್ಬದ ಕಾರ್ಯಕ್ರಮ ನಡೆದಿದೆ.
ಒಂದು ವರ್ಷದ ಮಗುವಿಗೆ ಅಭಿನಂದನ್ ಎಂದು ಶಾಸ್ತ್ರೋಕ್ತವಾಗಿ ನಾಮಕರಣ ಮಾಡಲಾಗಿದೆ. ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣಾದೀನ ಖೈದಿಯಾಗಿರುವ ಆಂಧ್ರ ಮೂಲದ ಜ್ಯೋತಿ ಎಂಬವರ ಮಗುವಿಗೆ ನಾಮಕರಣ ನಡೆದಿದೆ.

ಜ್ಯೋತಿ ವರ್ಷದ ಹಿಂದೆ ವಿಜಯಪುರದ ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಪೂಜಾ ವಿಧಿ- ವಿಧಾನ, ಮಂತ್ರ ಘೋಷಗಳೊಂದಿಗೆ ಮಗುವಿಗೆ ನಾಮಕರಣ ಮಾಡಲಾಗಿದೆ. ಅಲ್ಲದೇ ಮಗುವಿಗೆ ತಾಯಿಯ ಇಚ್ಚೆಯಂತೆ ಅಭಿನಂದನ್ ಎಂದು ನಾಮಕರಣ ಮಾಡಲಾಗಿದೆ.

ಜಿಲ್ಲಾ ನ್ಯಾಯಾಧೀಶ ಸಂಜೀವ್ ಕುಲಕರ್ಣಿ ನೇತೃತ್ವದಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದ್ದು, ಮಹಿಳಾ ಬಂಧಿಗಳು ಗ್ರಾಮೀಣ ಸೊಗಡಿನ ಜೋಗುಳ ಹಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply