ಅಡ್ಡಾ ದಿಡ್ಡಿ ಬಸ್ ಚಾಲನೆ – ಎರಡು ಕಾರಿಗೆ ಡಿಕ್ಕಿ

ಬೆಂಗಳೂರು: ಅಡ್ಡಾ ದಿಡ್ಡಿ ವಾಹನ ಚಲಾಯಿಸಿದ ಬಸ್ ಚಾಲಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ತಡರಾತ್ರಿ ನಗರದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದಿದೆ.

ದುರ್ಗಾಂಭಾ ಟ್ರಾವೆಲ್ಸಿನ ಬಸ್ ವೇಗವಾಗಿ ಬಂದು ಸಿಗ್ನಲ್ ನಲ್ಲಿ ನಿಂತಿದ್ದ ಎರಡು ಕಾರಿಗೆ ಡಿಕ್ಕಿ ಹೊಡೆದಿದೆ. ಮಂಗಳೂರು ಹಾಗೂ ಉಡುಪಿಗೆ ತೆರಳುವ ಬಸ್ ಖಾಲಿಯಾಗಿ ಸಂಚರಿಸುತಿತ್ತು. ಈ ವೇಳೆ ಡ್ರೈವರ್ ವೇಗವಾಗಿ ಬಸ್ ಚಲಾಯಿಸಿದ್ದಾನೆ. ರಿಚ್ ಮಂಡ್ ಸರ್ಕಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೂ ಚಾಲಕ ಅಡ್ಡಾದಿಡ್ಡಿ ವಾಹನ ಚಲಾಯಿಸಿದ್ದಾನೆ. ಬಳಿಕ ಮೈಸೂರ್ ಬ್ಯಾಂಕ್ ಸರ್ಕಲ್ ಬಳಿ ಎರಡು ಕಾರ್ ಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಬಸ್ ಚಾಲಕನನ್ನು ಹಿಡಿದು ಸಖತ್ ಗೂಸ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಪೊಲೀಸರು ಚಾಲಕನನ್ನ ರಕ್ಷಣೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ಸದ್ಯಕ್ಕೆ ಈ ಕುರಿತು ಹಲಸೂರು ಗೇಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *