ಉಕ್ಕಿನ ಸೇತುವೆ ಬೇಕು ಎಂದು ಬೆಂಗಳೂರಿನ ಹೆಬ್ಬಾಳದಲ್ಲಿ ಪ್ರತಿಭಟನೆ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಸ್ಟೀಲ್ ಬ್ರಿಡ್ಜ್ ಯೋಜನೆ ಕೈ ಬಿಟ್ಟಿದ್ದು, ಇದೀಗ ಸ್ಟೀಲ್ ಬ್ರಿಡ್ಜ್ ಯೋಜನೆ ಬೇಕು ಎಂದು ಆಗ್ರಹಿಸಿ ಹೆಬ್ಬಾಳದಲ್ಲಿ ನಾಗರೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲೇ ಬೇಕು ಅಂತಾ ನಾಗರೀಕರು ಎಸ್ಟೀಮ್ ಮಾಲ್ ನ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೆಬ್ಬಾಳ ದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಜಾಸ್ತಿಯಿದೆ. ಡೋಂಗಿ ಪರಿಸರವಾದಿಗಳಿಂದ ಅಭಿವೃದ್ಧಿಗೆ ಕತ್ತರಿ ಬಿದ್ದಿದೆ ಅಂತಾ ಪ್ರತಿಭಟನಾಕಾರರು ಆಕ್ರೋಶ ವ್ತಕ್ತಪಡಿಸುತ್ತಿದ್ದಾರೆ.

ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಸಂಬಂಧಿಸಿದಂತೆ 65 ಕೋಟಿ ರೂ. ಹಣವನ್ನು ಸಿಎಂ ತೆಗೆದುಕೊಂಡಿದ್ದಾರೆ. ಐಟಿ ದಾಳಿ ವೇಳೆ ಪತ್ತೆಯಾದ ಗೋವಿಂದರಾಜು ಡೈರಿಯಲ್ಲಿ 65 ಕೋಟಿ ರೂ. ಕಪ್ಪದ ಬಗ್ಗೆ ಬರವಣಿಗೆ ಸಾಕ್ಷಿ ಇದೆ ಅಂತಾ ಬಿಎಸ್‍ವೈ ಆರೋಪ ಮಾಡಿದ್ದರು. ಆರೋಪ ಹೊತ್ತು ಯೋಜನೆಯನ್ನು ಮುಂದುವರೆಸುವುದಿಲ್ಲ ಎಂದು ಹೇಳಿ ಸರ್ಕಾರ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈ ಬಿಟ್ಟಿತ್ತು.

ಏನಿದು ಸ್ಟೀಲ್‍ಬ್ರಿಡ್ಜ್ ವಿವಾದ?: ಬೆಂಗಳೂರಿನ ಚಾಲುಕ್ಯ ಸರ್ಕಲ್‍ನಿಂದ ಹೆಬ್ಬಾಳದವರೆಗೆ 1790 ಕೋಟಿ ರೂ. ವೆಚ್ಚದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲು ಸರ್ಕಾರ ಚಿಂತನೆ ನಡೆಸಿತ್ತು. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಈ ಯೋಜನೆಯನ್ನು ಮಾಡಲಾಗಿತ್ತು. ಆದ್ರೆ ಬ್ರಿಡ್ಜ್ ನಿರ್ಮಾಣದಿಂದ ಸಾವಿರಾರು ಮರಗಳ ಮಾರಣಹೋಮವಾಗಲಿದ್ದು ಪರಿಸರಕ್ಕೆ ಹಾನಿಯಾಗುತ್ತೆ ಎಂಬ ಕಾರಣಕ್ಕೆ ವಿವಾದವಾಗಿತ್ತು. ಪ್ರತಿಪಕ್ಷ ಬಿಜೆಪಿ ಕೂಡ ಈ ಯೋಜನೆಯನ್ನು ವಿರೋಧಿಸಿತ್ತು. ಬಳಿಕ ಈ ಯೋಜನೆಯಲ್ಲಿ ಡೀಲ್ ಆಗಿದೆ ಅಂತಾ ಬಿಜೆಪಿ ಆರೋಪಿಸಿತ್ತು. ಪರಿಸರವಾದಿಗಳು ಚೆನ್ನೈನ ಹಸಿರು ಪೀಠದಿಂದ ಯೋಜನೆಗೆ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆ ಹಿನ್ನೆಲೆಯಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ವಿಳಂಬವಾಗಿತ್ತು. ಈ ನಡುವೆ ಗೋವಿಂದರಾಜು ಡೈರಿಯಲ್ಲಿ ಸ್ಟೀಲ್‍ಬ್ರಿಡ್ಜ್‍ಗಾಗಿ ಸಿಎಂ 65 ಕೋಟಿ ರೂ. ಕಿಕ್‍ಬ್ಯಾಕ್ ಪಡೆದಿರುವ ಉಲ್ಲೇಖವಿದೆ ಎಂದು ಬಿಎಸ್‍ವೈ ಆರೋಪ ಮಾಡಿದ್ದರು.

ಇದನ್ನೂ ಓದಿ: ಸ್ಟೀಲ್‍ ಬ್ರಿಡ್ಜ್ ನಿರ್ಮಾಣ ಕೈಬಿಡಲು ಸರ್ಕಾರ ತೀರ್ಮಾನ

ಇದನ್ನೂ ಓದಿ:  ಬಿಎಸ್‍ವೈ ಡೈರಿ ಹೊಡೆತಕ್ಕೆ ಸ್ಟೀಲ್ ಬ್ರಿಡ್ಜ್ ಕುಸಿತ!

Comments

Leave a Reply

Your email address will not be published. Required fields are marked *