ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕೊಡಗಿನಲ್ಲಿ ಮರ ಕಡಿಯುವುದನ್ನು ನಿಲ್ಲಿಸಲು ಸಿಎಂ ಸೂಚನೆ

ಬೆಂಗಳೂರು: 800 ಮರಗಳನ್ನು ಕಡಿಯುವುದನ್ನು ನಿಲ್ಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ರೆಸಾರ್ಟ್ ನಿರ್ಮಾಣ ಮಾಡಲು ಕೊಡಗಿನಲ್ಲಿ ಬರೋಬ್ಬರಿ 800 ಮರಗಳನ್ನು ಕಡಿಯುತ್ತಿರುವ ಬಗ್ಗೆ ಪಬ್ಲಿಕ್ ಟಿವಿ ಇಂದು ಬೆಳಗ್ಗೆಯಿಂದ ನಿರಂತರ ವರದಿ ಪ್ರಸಾರ ಮಾಡಿತ್ತು. ಈ ವರದಿ ನೋಡಿದ ಸಿಎಂ ಕುಮಾರಸ್ವಾಮಿ ಅವರು ಕೂಡಲೇ ಮರ ಕಡಿಯುವುದನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಆಫ್ ಕರ್ನಾಟಕ, “ಕೊಡಗು ಜಿಲ್ಲೆಯಲ್ಲಿ 800 ಮರಗಳನ್ನು ಕಡಿಯುವ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವರದಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದೇ ಮರಗಳನ್ನು ಕಡಿಯುವುದನ್ನು ನಿಲ್ಲಿಸಿ, ವರದಿಯನ್ನು ನೀಡುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ.

https://twitter.com/CMofKarnataka/status/1136888802247565312

ಆಂಧ್ರ ಮೂಲದ ಉದ್ಯಮಿಯೊಬ್ಬರಿಗೆ ರೆಸಾರ್ಟ್ ನಿರ್ಮಾಣ ಮಾಡಲು ಬರೋಬ್ಬರಿ 800 ಮರಗಳನ್ನು ಕಡಿಯುವುದಕ್ಕೆ ಸ್ವತಃ ಅರಣ್ಯ ಇಲಾಖೆ ಒಪ್ಪಿಗೆ ನೀಡಿತ್ತು. ಮಡಿಕೇರಿ ತಾಲೂಕಿನ ಕೆ ನಿಡುಗಣೆಯಲ್ಲಿ ಆಂಧ್ರ ಮೂಲದ ರೆಡ್ಡಿ ಎಂಬವರು 68 ಏಕರೆ ಜಾಗ ಖರೀದಿಸಿದ್ದಾರೆ.

ಬೃಹತ್ ಮರ, ಬೆಟ್ಟ ಗುಡ್ಡಗಳಿಂದ ಈ ಜಾಗದಲ್ಲಿ 30 ಎಕರೆಯನ್ನು ಅಭಿವೃದ್ಧಿಪಡಿಸಿ ಹೌಸಿಂಗ್ ಬೊರ್ಡ್ ಗೆ ಕೊಡುತ್ತೇವೆ. ಆ 30 ಎಕರೆಯಲ್ಲಿರುವ ಮರಗಳನ್ನು ಕಡಿಯಲು ಅನುಮತಿ ಕೊಡಿ ಎಂದು ಜಾಗದ ಮಾಲೀಕ ಅನುಮತಿ ಕೇಳಿದ್ದರು. ಈ ಪ್ರಸ್ತಾಪಕ್ಕೆ ಅನುಮತಿ ನೀಡಿದ ಕೊಗು ಜಿಲ್ಲಾಡಳಿತ ಕನ್ವರ್ಷನ್‍ಗೆ ಅವಕಾಶ ಕೊಟ್ಟಿತ್ತು.

Comments

Leave a Reply

Your email address will not be published. Required fields are marked *