ಕೊಡಗು ವಿದ್ಯಾರ್ಥಿಗಳಿಗೆ ಪಿಯುಸಿ ಬೋರ್ಡ್ ಅಭಯ!

ಬೆಂಗಳೂರು: ಕೊಡಗು ಮಳೆಗೆ ಕೊಚ್ಚಿ ಹೋದ ವಿದ್ಯಾರ್ಥಿಗಳ ಭವಿಷ್ಯದ ನೆರವಿಗೆ ಇದೀಗ ಪಿಯುಸಿ ಬೋರ್ಡ್ ಧಾವಿಸಿದೆ.

ಮಳೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕೊಚ್ಚಿ ಹೋಗಿರುವುದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಹೀಗಾಗಿ ಮಕ್ಕಳಿಗೆ ಅಭಯ ನೀಡಿರುವ ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು, ಕೊಡಗು ಮಕ್ಕಳಿಗೆ ಉಚಿತ ಅಂಕಪಟ್ಟಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳು ತಾವು ಓದಿದ ಕಾಲೇಜಿಗೆ ಹೋಗಿ ಹೆಸರು ನೊಂದಾಯಿಸಿಕೊಳ್ಳಬೇಕು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮಾಹಿತಿಯನ್ನ ಉಪ ನಿರ್ದೇಶಕರಿಗೆ ನೀಡುತ್ತಾರೆ. ಬಳಿಕ ನೋಂದಾಯಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ದ್ವೀತಿಯ ಪಿಯುಸಿ ಅಂಕಪಟ್ಟಿ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ರಜೆಯಿಂದಾಗಿ ಹಾಜರಾತಿ ಕೊರತೆ ಅನ್ನೋ ಆತಂಕವೂ ವಿದ್ಯಾರ್ಥಿಗಳಿಗೆ ಬೇಡ. ದಸರಾ ರಜೆ, ಇನ್ನಿತರ ರಜೆಗಳಲ್ಲಿ ವಿಶೇಷ ತರಗತಿ ಮಾಡಿ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡುವುದಾಗಿ ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *