ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದುಕೊಂಡ ಪಿಯುಸಿ ವಿದ್ಯಾರ್ಥಿಗಳು

ಚಿಕ್ಕಮಗಳೂರು: ಕಾಲೇಜು ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಒಂದು ಗುಂಪು ಮತ್ತೊಂದು ಗುಂಪಿನ ಮೇಲೆ ಚಾಕು ಹಾಕಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮೂಡಿಗೆರೆ ಪಿಯು ಕಾಲೇಜಿನಲ್ಲಿ ಓದುತ್ತಿರುವ ವಿನಯ್, ಗಾಯನ್, ಸಾಗರ್ ಹಾಗೂ ಚೇತನ್ ಹೊಡೆದಾಡಿಕೊಂಡು ವಿದ್ಯಾರ್ಥಿಗಳು. ಕಾಲೇಜು ಮುಗಿಸಿಕೊಂಡು ಮನೆಗೆ ಹೋಗುವಾಗ ನಗರದ ಸಂತೇ ಮೈದಾನದಲ್ಲಿ ನಾಲ್ವರ ಮಧ್ಯೆ ಜಗಳ ನಡೆದಿದೆ.

ಇದೇ ವೇಳೆ, ಯುವಕರಾದ ಸಾಗರ್ ಹಾಗೂ ಚೇತನ್, ವಿನಯ್ ಹಾಗೂ ಗಾಯನ್ ಎಂಬವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮೂಡಿಗೆರೆ ಪೊಲೀಸರು ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಲ್ಲದೆ ಚಾಕುವಿನಿಂದ ಹಲ್ಲೆ ಮಾಡಿದವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದಾಗ ಅವರ ಬೈಕಿನಲ್ಲಿದ್ದ ಸೈಕಲ್ ಚೈನ್ ಹಾಗೂ ಚಾಕುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *