ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪುದುಚೆರಿ ಸಿಎಂ ಭೇಟಿ

ಉಡುಪಿ: ಸುಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮೂಕಾಂಬಿಕೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಕೆಲಕಾಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ರು. ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕೊನೆಗೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್ ಕೃಷ್ಣಮೂರ್ತಿ ಅವರು ಮುಖ್ಯಮಂತ್ರಿಯನ್ನು ಸನ್ಮಾನಿಸಿದರು.

ಕೆಲವು ದಿನಗಳ ಹಿಂದಷ್ಟೆ ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.

 

Comments

Leave a Reply

Your email address will not be published. Required fields are marked *