ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಬಿಸಿನೆಸ್ ಮ್ಯಾನ್

ಮುಂಬೈ: ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ.

38 ವರ್ಷದ ನಿಲೇಶ್ ಚೌಧರಿ ಆತ್ಮಹತ್ಯೆಗೆ ಶರಣಾದ ಬಿಸಿನೆಸ್ ಮ್ಯಾನ್. ಪತ್ನಿ ನೀಲಂ(33) ಮಕ್ಕಳಾದ ಶ್ರಾವಣಿ(9) ಮತ್ತು ಶ್ರೇಯಾ(7) ಮೃತ ದುರ್ದೈವಿಗಳು ಎಂದು ಉತ್ತಂ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹೇಮಂತ್ ಭಟ್ ತಿಳಿಸಿದ್ದಾರೆ.

ನಿಲೇಶ್ ಚೌಧರಿ ಪ್ಲಾಸ್ಟಿಕ್ ರಿಮೋಲ್ಡಿಂಗ್ ಬಿಸಿನೆಸ್ ನಡೆಸುತ್ತಿದ್ದರು. ಆದರೆ ಇತ್ತೀಚೆಗೆ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ನಿಲೇಶ್ ಚೌಧರಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ನಾನು ಆರ್ಥಿಕ ತೊಂದರೆಗಳಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ನಿಲೇಶ್ ಚೌಧರಿ ಮೃತದೇಹ ಫ್ಲಾಟ್‍ನಲ್ಲಿ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆದರೆ ಪತ್ನಿ ಮತ್ತು ಮಕ್ಕಳ ಮೃತದೇಹ ಹಾಸಿಗೆ ಮೇಲೆ ಪತ್ತೆಯಾಗಿದೆ ಎಂದು ಭಟ್ ಹೇಳಿದ್ದಾರೆ.


ನಿಲೇಶ್ ಚೌಧರಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ವಿಷ ಸೇವಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನೆರೆಹೊರೆಯವರು ನೋಡಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸದ್ಯಕ್ಕೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಮೇಲೆ ಪತ್ನಿ ಮತ್ತು ಮಕ್ಕಳ ಸಾವಿಗೆ ನಿಖರ ಕಾರಣ ತಿಳಿಯುತ್ತದೆ ಎಂದು ಹೇಮಂತ್ ಭಟ್ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *