ಅಪ್ಪು ಪ್ರೇರಣೆ – ಅಭಿಮಾನಿಗಳಿಂದ ನೇತ್ರದಾನದ ಜೊತೆಗೆ ದೇಹದಾನಕ್ಕೆ ನೋಂದಣಿ

ಯಾದಗಿರಿ: ನಟ ಪುನೀತ್ ರಾಜಕುಮಾರ್ ತಮ್ಮ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದರು. ನೇತ್ರದಾನ ಮಾಡಿದ ಅಪ್ಪು ತಮ್ಮ ಅಭಿಮಾನಿಗಳಿಗೆ ಮಾದರಿಯಾಗಿದ್ದು, ಈಗ ಅವರ ಅಭಿಮಾನಿ ದೇವರುಗಳು ಸಹ ಅಪ್ಪು ಮಾರ್ಗವನ್ನು ಅನುಸರಿಸಿದ್ದಾರೆ.

ಯಾದಗಿರಿ ನಗರದ ಗಂಜ್ ಬಳಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಅಪಾರ ಅಭಿಮಾನಿಗಳು ಕೇವಲ ನೇತ್ರದಾನ ಮಾಡುವುದು ಮಾತ್ರವಲ್ಲದೆ, ದೇಹ ದಾನ ಮಾಡುವುದಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಯಾದಗಿರಿ ನಗರದ ನಿವಾಸಿಗಳಾದ ಹನುಮಯ್ಯ ಹಾಗೂ ಮಲ್ಲಿಕಾರ್ಜುನ ದಂಪತಿ ದೇಹದಾನಕ್ಕೆ ನೊಂದಣಿ ಮಾಡಿಕೊಂಡಿದ್ದಾರೆ. 52 ಮಂದಿ ಅಪ್ಪು ಅಭಿಮಾನಿಗಳು ನೇತ್ರದಾನಕ್ಕೂ ಸಹ ನೋಂದಣಿ ಮಾಡಿಕೊಂಡಿದ್ದಾರೆ.

ಅಪ್ಪು ಅಭಿಮಾನಿಗಳಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ರಾಯಚೂರಿನ ರಿಮ್ಸ್ ಆಸ್ಪತ್ರೆ ಸಹಯೋಗದಲ್ಲಿ ಅವರ ಅಭಿಮಾನಿಗಳು ಈ ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

Comments

Leave a Reply

Your email address will not be published. Required fields are marked *