ಮೋದಿಗೆ ರಾಜ್ ಆತ್ಮ ಚರಿತ್ರೆಯನ್ನು ನೀಡಿದ ಪುನೀತ್ ದಂಪತಿ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಇಂದು ನಗರದ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತಿಸಿದರು.

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಪುನೀತ್ ರಾಜ್‍ಕುಮಾರ್ ದಂಪತಿ ಸ್ವಾಗತ ಕೋರಿಸಿ ಡಾ.ರಾಜಕುಮಾರ್ ಆತ್ಮಚರಿತ್ರೆಯನ್ನು ಕಾಣಿಕೆಯಾಗಿ ನೀಡಿದರು.

ಪಕ್ಷದ ಪರ ಮೇ 1 ರಿಂದ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ಮೋದಿ ಅವರು ಇಂದು ಕಲಬುರುಗಿ ಹಾಗೂ ಬಳ್ಳಾರಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಬಳಿಕ ಸಂಜೆ ವೇಳೆಗೆ ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದರು.

ಸಮಾವೇಶದಲ್ಲಿ ಕನ್ನಡದಲ್ಲೇ ಭಾಷಣ ಆರಂಭ ಮಾಡಿದ ಮೋದಿ, ನಾಡಪ್ರಭು ಕೆಂಪೇಗೌಡ, ಡಾ. ರಾಜಕುಮಾರ್, ಸಿವಿ ರಾಮನ್, ವಿಶ್ವೇಶ್ವರಯ್ಯನವರ ನೆನೆದು ಹೊಗಳಿದ್ದರು. ಅಲ್ಲದೇ ಕ್ರೀಡಾರಂಗದಲ್ಲಿ ದೇಶಕ್ಕೆ ಕೀರ್ತಿ ತಂದ ಬೆಂಗಳೂರಿನ ಕ್ರೀಡಾಪಟುಗಳಿಗೆ ನನ್ನ ನಮನಗಳು ಎಂದು ಹೇಳಿ ಭಾಷಣ ಆರಂಭಿಸಿದರು.

Comments

Leave a Reply

Your email address will not be published. Required fields are marked *