ಇದು ಸಾಯುವ ವಯಸ್ಸು ಅಲ್ಲ: ನರೇಂದ್ರ ಮೋದಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅಗಲಿಕೆ ಇಡೀ ಭಾರತೀಯ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟವನ್ನುಂಟು ಮಾಡಿದ್ದು, ಪುನೀತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಅವರು ತಮ್ಮ ಟ್ವಿಟ್ಟರ್‍ನಲ್ಲಿ, ವಿಧಿಯ ಕ್ರೂರ ತಿರುವು ಪುನೀತ್ ರಾಜ್‍ಕುಮಾರ್ ಎಂಬ ಸಮೃದ್ಧ ಮತ್ತು ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ. ಇದು ಸಾಯುವ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಕೃತಿಗಳು ಮತ್ತು ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

 

ನಟ ಪುನೀತ್ ರಾಜ್‍ಕುಮಾರ್(46) ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಎಂದಿನಂತೆ ಬೆಳಗ್ಗೆ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ಅಪ್ಪು ಬೆಳಗ್ಗೆ 11 ಗಂಟೆ ಸುಮಾರಿಗೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ರಮಣಶ್ರೀ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ್ದಾರೆ.

Comments

Leave a Reply

Your email address will not be published. Required fields are marked *