ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ: ಅತಿಥಿಯಾಗಿ ಬೆಂಗಳೂರಿಗೆ ಬಂದ ಜ್ಯೂನಿಯರ್ ಎನ್.ಟಿ.ಆರ್

ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಇಂದು ಕರ್ನಾಟಕ ರತ್ನ (Karnataka Ratna)  ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲೆಂದು ಅಪ್ಪು ಅವರ ಜೀವದ ಗೆಳೆಯ ಜ್ಯೂನಿಯರ್ ಎನ್.ಟಿ.ಆರ್ ಇದೀಗ ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರಿಗೆ ಎಚ್.ಎ.ಎಲ್ ಏರ್ಪೋಟಿಗೆ ಬಂದಿಳಿದ ಜ್ಯೂನಿಯರ್ ಎನ್‍.ಟಿ. ಆರ್ (Junior NTR) ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಮತ್ತು ಸಚಿವ ಮುನಿರತ್ನ ಅವರು ಬರಮಾಡಿಕೊಂಡರು. ಸರಕಾರದ ಕೆಲ ಪ್ರತಿನಿಧಿಗಳು ಕೂಡ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಇಂದು ಸಂಜೆ 4 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ನಿನ್ನೆಯಷ್ಟೇ ಪುನೀತ್ ಮನೆಗೆ ಆಗಮಿಸಿದ್ದ ಸಚಿವ ಆರ್. ಅಶೋಕ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಸ್ವಾಗತ ಕೋರಿದರು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *