ಪೈರು ಕೊಯ್ಲು ವೇಳೆ ಕಂಡ ಹೆಬ್ಬಾವು

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತೊಪ್ಪನಹಳ್ಳಿ ಬಳಿ ಇರುವ ಗದ್ದೆಯೊಂದರಲ್ಲಿ ಪೈರು ಕೊಯ್ಲು ವೇಳೆ ಪ್ರತ್ಯಕ್ಷವಾಗಿದ್ದ ಹೆಬ್ಬಾವೊಂದನ್ನು ಪ್ರಾಣಿ ಪ್ರಿಯ ಹಾಗೂ ಉರಗತಜ್ಞ ಮುರಳಿ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ರೈತರು ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಇದರಿಂದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಗ್ರಾಮಸ್ಥರು, ರೈತರು ಆತಂಕಕ್ಕೊಳಗಾಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಜಿಎಫ್‍ನ ಅನಿಮಲ್ ರೆಸ್ಕ್ಯೂ ಸಂಸ್ಥೆಯ ಉರಗತಜ್ಞ ಮುರಳಿ ಅವರು ಕೆಲಕಾಲ ಸಾಹಸ ಮಾಡಿ ಹೆಬ್ಬಾವನ್ನು ಹಿಡಿದು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಹೆಬ್ಬಾವನ್ನು ಹಿಡಿಯುತ್ತಿದ್ದಂತೆ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಅಲ್ಲದೇ ಸ್ಥಳದಲ್ಲಿ ಹೆಬ್ಬಾವನ್ನು ನೋಡಲು ಬಂದಂತ ಗ್ರಾಮದ ಜನರು ಹೆಬ್ಬಾವಿನೊಂದಿಗೆ ಫೋಟೊಗಳನ್ನು ಕ್ಲಿಕ್ಕಿಸಿಕೊಂಡರು. ಸ್ಥಳದಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ತೊಪ್ಪನಹಳ್ಳಿ ಅರಣ್ಯ ಪ್ರದೇಶಕ್ಕೆ ಹೆಬ್ಬಾವನ್ನು ಬಿಡಲಾಯಿತು.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮ್ಲಾಪುರದ ಗ್ರಾಮದಲ್ಲಿ ನಾಗರಹಾವನ್ನು ಅಟ್ಟಿಸಿಕೊಂಡು ಬಂದು ಅದು ಕೈತಪ್ಪಿದರಿಂದ 13 ಅಡಿ ಉದ್ದದ ಕಾಳಿಂಗ ಸರ್ಪ ಒಂದು ವಾರದಿಂದ ಅಡಿಕೆ ಮರದ ಲಾಟಿನಲ್ಲೇ ವಾಸವಾಗಿತ್ತು. ಅಡಿಕೆ ಮರಗಳ ಮಧ್ಯೆ ಸೇರಿಕೊಂಡಿದ್ದ ಕಾಳಿಂಗ ಒಂದು ವಾರದಿಂದ ಅಲ್ಲೇ ವಾಸವಾಗಿದ್ದನು. ಸೋಮವಾರ ಹೊರಬಂದ ಕಾಳಿಂಗನನ್ನು ನೋಡಿ ಭಯಗೊಂಡ ಗ್ರಾಮಸ್ಥರು ಸ್ನೇಕ್ ಹರೀಂದ್ರಾರನ್ನು ಕರೆಸಿ ಕಾಳಿಂಗನನ್ನು ಸೆರೆಹಿಡಿದಿದ್ದರು. ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಒಂದು ಗಂಟೆಯ ಕಾರ್ಯಚರಣೆ ನಡೆಸಿ ಸೆರೆ ಹಿಡಿದ ಕಾಳಿಂಗನನ್ನು ಸ್ಥಳೀಯ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *