ಕ್ವಾರಿಯಲ್ಲಿ ಈಜಲೆಂದು ಮೇಲಿಂದ ಜಿಗಿದ ಯುವಕ ದುರ್ಮರಣ

ಯಾದಗಿರಿ: ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಮೃತ ಯುವಕನನ್ನು ನಾಯ್ಕಲ್ ಗ್ರಾಮದ 24 ವರ್ಷದ ರುದ್ರಗೌಡ ಎಂದು ಗುರುತಿಸಲಾಗಿದೆ. ಮೃತ ರುದ್ರಗೌಡ ಶನಿವಾರ ಬೆಳಗ್ಗೆ ಸುಮಾರು 11 ಗಂಟೆಗೆ ವಡಗೇರಾ ತಾಲೂಕಿನ ಗುರುಸಣಗಿ ಗ್ರಾಮದ ಹತ್ತಿರದಲ್ಲಿರುವ ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿದ್ದ ಎನ್ನಲಾಗಿದೆ.

ಕ್ವಾರಿಯಲ್ಲಿ ಈಜಲು ರುದ್ರಗೌಡ ಮೇಲಿಂದ ಕೆಳಗೆ ಜಿಗಿದಿದ್ದಾನೆ. ಆದರೆ ಮೇಲಿಂದ ಬೀಳುವಾಗ ಕ್ವಾರಿಯಲ್ಲಿನ ಕಲ್ಲಿಗೆ ತೆಲೆತಾಗಿ ಸ್ಥಳದಲ್ಲೇ ರುದ್ರಗೌಡ ಮೃತಪಟ್ಟಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಯುವಕನ ಮೃತದೇಹವನ್ನು ಮೇಲೆತ್ತಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಕುರಿತು ವಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *