ಗೋ ಪೂಜೆ ಮಾಡುವವರು ಗೋಮಾಂಸ ತಿಂತೀನಿ ಅಂದ್ರೆ ಅವರಿಗಿಂತ ಕಟುಕ ಈ ಪ್ರಪಂಚದಲ್ಲಿ ಯಾರು ಇಲ್ಲ: ಆರ್.ಅಶೋಕ್

ಬೀದರ್: ಒಳ್ಳೆಯದಾಗಲಿ ಎಂದು ಗೋವು ಪೂಜೆ ಮಾಡತ್ತಾರೆ. ಆ ಬಳಿಕ ಅದನ್ನೇ ನಾನು ತಿಂತೀನಿ ಅಂದ್ರೆ ಅವರಿಗಿಂತ ಈ ಪ್ರಪಂಚದಲ್ಲಿ ಕಟುಕರು ಯಾರು ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ್ರೆ ಗೋ ಹತ್ಯೆ ಕಾಯಿದೆಯನ್ನು ರದ್ದು ಮಾಡುತ್ತೇನೆ ಹಾಗೂ ಬೀಫ್ ಮಾಂಸ ತಿನ್ನುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ವಿಪರ್ಯಾಸ. ಗೋವು ಅಂದ್ರೆ ಮುಕ್ಕೋಟಿ ದೇವರುಗಳು ವಾಸ ಮಾಡುವ ಸ್ಥಳ ಎಂಬ ಭಾವನೆ ಇದೆ. ಸಿದ್ದರಾಮಯ್ಯನವರ ಪತ್ನಿ, ಮಕ್ಕಳು ಗೃಹ ಪ್ರವೇಶ ಮಾಡುವಾಗ ಮೊದಲು ಗೋವನ್ನು ಮನೆಯೊಳಗೆ ಕರೆಸಿದ್ದಾರೆ. ಇದೀಗ ಈ ರೀತಿ ಹೇಳಿಕೆ ನೀಡಿರುವುದು ಮುಸ್ಲಿಂ ಮತಗಳ ಓಲೈಕೆಗಾಗಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕನ್ನಡಿಗರ ತಂಟೆಗೆ ಬಂದ್ರೆ ಹುಷಾರ್! – MES ಪುಂಡರಿಗೆ ಸಿಎಂ ಎಚ್ಚರಿಕೆ

SIDDARAMAIAH

ಸಿದ್ದರಾಮಯ್ಯ ಹಿಂದೂಗಳ ಭಾವನೆಗಳನ್ನು ಕೆರಳಿಸಲು ಹಾಗೂ ಮುಸ್ಲಿಂ ಮತಗಳ ಓಲೈಕೆಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಇದು ನಿಮಗೂ ಒಳ್ಳೆಯದಲ್ಲ. ಸಮಾಜಕ್ಕೂ ಒಳ್ಳೆಯದಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಜಾರಂದಾಯ ದೈವದ ಪವಾಡ – ಮದುವೆ ಹಾಲ್‍ನಲ್ಲಿ ಕಳ್ಳತನವಾದ ಚಿನ್ನದ ಸರ ಅಚ್ಚರಿಯ ರೀತಿಯಲ್ಲಿ ಪತ್ತೆ

Comments

Leave a Reply

Your email address will not be published. Required fields are marked *