ಮುಂದೆ ಯಾರು ಇಂತಹ ಹೇಳಿಕೆ ಕೊಡಬಾರದು ಅಂತಹ ಕ್ರಮ ಆಗಬೇಕು: ದೇಶಪಾಂಡೆ

ಬೆಂಗಳೂರು: ಗಾಂಧೀಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟ ಅನಂತ್ ಕುಮಾರ್ ಹೆಗ್ಡೆ ಬೇಷರತ್ ದೇಶದ ಜನರ ಕ್ಷಮೆ ಕೇಳಬೇಕು. ಹೆಗ್ಡೆ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮ ತಗೆದುಕೊಳ್ಳಬೇಕು. ಕ್ರಮ ಹೇಗಿರಬೇಕು ಎಂದರೆ ಮುಂದೆ ಯಾರು ಇಂತಹ ಮಾತಬಾಡಬಾರದು ಅಂತಹ ಕ್ರಮ ತಗೆದುಕೊಳ್ಳಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆಗ್ರಹಿಸಿದ್ದಾರೆ.

ಸಂಸದ ಅನಂತ್ ಕುಮಾರ್ ಹೆಗ್ಡೆ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಗೆ ಅವಮಾನ ಮಾಡಿದ್ದಾರೆ. ಇದು ಬರೀ ಗಾಂಧೀಜಿ ಅವರಿಗೆ ಮಾಡಿದ ಅವಮಾನ ಅಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಎಲ್ಲರಿಗೂ ಮಾಡಿದ ಅವಮಾನ. ಸಂವಿಧಾನಕ್ಕೂ ಅಪಚಾರ ಮಾಡಿದ್ದಾರೆ. ಹೆಗ್ಡೆ ಇಡೀ ದೇಶದ ಜನ, ಸ್ವಾತಂತ್ರ್ಯ ಹೋರಾಟಗಾರರಿಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಇಂತಹ ಬೇಜವಬ್ದಾರಿ ಹೇಳಿಕೆಗಳನ್ನು ಯಾವ ಭಾರತೀಯನು ಸಹಿಸಲು ಸಾಧ್ಯವಿಲ್ಲ. ಬಿಜೆಪಿ ನಾಯಕರು ಹೆಗ್ಡೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೆಗಡೆ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಸ್ವಾತಂತ್ರ್ಯ ತಂದುಕೊಟ್ಟವರನ್ನ ಅವಮಾನಿಸಿದ್ದಾರೆ. ಅವರು ಉತ್ತರ ಕನ್ನಡದಿಂದ ಸಂಸದರಾಗಿದ್ದಾರೆ. ಅಂಕೋಲಾ, ಶಿರಸಿ, ಸಿದ್ದಾಪುರ ಜನ ಸ್ವಾತಂತ್ರ್ಯ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು ಎಂದರು.

ಮೊದಲು ರಾಷ್ಟ್ರದ ಜನರ ಕ್ಷಮೆಯಾಚಿಸಬೇಕು. ಬಿಜೆಪಿ ರಾಷ್ಟ್ರೀಯ ನಾಯಕರು ಕ್ರಮ ತೆಗೆದುಕೊಳ್ಳಬೇಕು. ಆರು ಬಾರಿ ಸಂಸದರಾಗಿ ಆರಿಸಿ ಬಂದಿದ್ದಾರೆ. ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ನಾನೊಬ್ಬ ಶಾಸಕ ನಾನು ತಪ್ಪು ಮಾಡಿದರೆ ನನ್ನ ಮೇಲೂ ನಮ್ಮ ಸ್ಪೀಕರ್ ಕ್ರಮ ತೆಗೆದುಕೊಳ್ಳಬಹುದು. ಹಾಗೆಯೇ ಹೆಗ್ಡೆ ವಿರುದ್ಧ ಗಂಭೀರ ಆರೋಪವಿದೆ ಸ್ಪೀಕರ್ ಕ್ರಮ ತಗೆದುಕೊಳ್ಳಬೇಕು ಎಂದು ದೇಶಪಾಂಡೆ ಆಗ್ರಹಿಸಿದರು.

Comments

Leave a Reply

Your email address will not be published. Required fields are marked *